ಸ್ವಂತ ಅರ್ಧ ಕೋಟಿ ರೂ. ಖರ್ಚಿನಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸದಾನಂದರಿಂದ ಮಾದರಿ ಸೇವಾ ಕಾರ್ಯ
ಶ್ರೀಧರ್ ಆರ್.ಭಟ್
ನಂಜನಗೂಡು: ಹಣ ಸಂಪಾದನೆಯೊಂದೇ ಜೀವನದ ಪ್ರಮುಖ ಧ್ಯೇಯ ಎಂಬಂತಾಗಿರುವ ಈ ಕಾಲ ಘಟ್ಟದಲ್ಲೂ ಇಲ್ಲೊಬ್ಬರು ಹೂಳು ತುಂಬಿಕೊಂಡು, ಕಾಣದಂತಾದ ಕೆರೆಯ ಪುನರ್ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಸರ್ಕಾರದಿಂದ ಅಥವಾ ವಿವಿಧ ಎನ್ಜಿಓಗಳಿಂದ ಬರಬಹುದಾದ ಹಣದಲ್ಲಿ ನೆಪ ಮಾತ್ರಕ್ಕೆ ಕಾಮಗಾರಿ ಮಾಡಿಸಿ ಅದರಲ್ಲಿ ತಮ್ಮ ಪಾಲೆಷ್ಟು ಎಂದು ಕೇಳುವ ಈ ಕಾಲದಲ್ಲೂ ಸ್ವಂತ ಹಣದಿಂದ ಕೆರೆ ಪುನರ್ ನಿರ್ಮಾಣ ಮಾಡುತ್ತಿರುವವರನ್ನು ನೋಡಲು ನೀವು ನಂಜನಗೂಡು ತಾಲ್ಲೂಕಿನ ಭೋಗಯ್ಯನ ಹುಂಡಿಗೆ ಆಗಮಿಸಬೇಕು.
50 ಲಕ್ಷ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ಪುನರ್ ನಿರ್ಮಾಣ : ಸುಮಾರು 7 ಎಕರೆ ವಿಸ್ತೀರ್ಣದ ಮಧ್ಯದಲ್ಲಿ ಐದಾರು ಬೃಹತ್ ಆಲದ ಮರಗಳಿರುವ ಇಲ್ಲಿನ ಪುರಾತನವಾದ ರುದ್ರಪ್ಪನ ಕೆರೆಯ ಪುನರ್ ನಿರ್ಮಾಣ ಈಗ ಭರದಿಂದ ಸಾಗಿದೆ.
ಇಂಥ ಜನೋಪಯೋಗಿ ಕಾರ್ಯವನ್ನು ಸದ್ದಿಲ್ಲದೆ ಮಾಡುತ್ತಿರುವವರು ಇದೇ ಕ್ಷೇತ್ರದ ತಗಡೂರು ಜಿಲ್ಲಾ ಪಂಚಾಯಿತಿಯ ನಿರ್ಗಮಿತ ಸದಸ್ಯ ಸದಾನಂದ.
ಈ ಪ್ರದೇಶ ಹೇಳಿ ಕೇಳಿ ತಾಲ್ಲೂಕಿನ ಖಾಯಂ ಬರಪೀಡಿತ ಪ್ರದೇಶ. ಅಂತರ್ಜಲ ಇಲ್ಲಿ ಕನಸೇ ಆಗಿದೆ. ಹತ್ತಾರು ವರ್ಷಗಳಿಗೆ ಒಮ್ಮೆ ಮಳೆ ಬಂದರೆ ಅದೇ ಪುಣ್ಯ ಎನ್ನುವ ಈ ಭೋಗಯ್ಯನಹುಂಡಿ ಈ ಕೆರೆಯ ಪುನರ್ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಅಹವಾಲು ಸಲ್ಲಿಸಿ 85 ಲಕ್ಷ ರೂ. ಅಂದಾಜು ಪಟ್ಟಿ ಸಿದ್ಧವಾಗಿಯೂ ಅದಕ್ಕೆ ಅನುಮತಿ ದೊರೆಯದೇ ಇದ್ದುದರಿಂದ ಹತಾಶರಾದ ಸದಾನಂದ ಈಗ ತಾವೇ ಮುಂದಾಗಿ ಕಾಮಗಾರಿ ಮಾಡಿ ಕೆರೆಗೆ ಕಾಯಕಲ್ಪ ನೀಡಲು ಸಂಕಲ್ಪ ಮಾಡಿದ ಸದಾನಂದ 15 ದಿನಗಳಿಂದ ಕೆರೆ ಕಾಮಗಾರಿ ಆರಂಭಿಸಿದ್ದಾರೆ.
ಪ್ರತಿನಿತ್ಯ ಲಕ್ಷಾಂತರ ರೂ. ಖರ್ಚಾಗುತ್ತಿರುವ ಈ ಕೆರೆಯ ಕಾಮಗಾರಿಯು ನೇರ ಉಸ್ತುವಾರಿ ಸಹ ಇವರದ್ದೇ ಆಗಿದೆ. ಗ್ರಾಮಸ್ಥರೊಂದಿಗೆ ಸ್ಥಳದಲ್ಲೇ ನಿಂತು ಕೆಲಸ ಮಾಡಿಸುತ್ತಿದ್ದಾರೆ.
ಇವರು ಜಿಪಂ ಸದಸ್ಯರಾದ ನಂತರ ಕ್ಷೇತ್ರದ ಕಾರ್ಯ, ಕಾಮಳ್ಳಿ, ಕಾರಾಪುರ ಹಾಗೂ ಅಳಂಗಂಚಿ ಕೆರೆಗಳಿಗೆ ಕಾಯಕಲ್ಪ ನೀಡಿ, ಈಗ 50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಹಣದಿಂದ ಕೆರೆ ಕಾಮಗಾರಿ ಕೈಗೊಂಡಿದ್ದಾರೆ.
ಎರಡು ಜಿಲ್ಲೆಗಳಿಗೆ ಸೇರಿದ ಕೆರೆ
ಎರಡು ಜಿಲ್ಲೆ, ಎರಡು ತಾಲ್ಲೂಕುಗಳಿಗೆ ಸೇರಿದ ಈ ಕೆರೆಯ ಅರ್ಧ ಭಾಗ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲ್ಲೂಕಿನ ನವಿಲೂರು ಪಂಚಾಯಿತಿಗೆ ಸೇರಿದರೆ ಉಳಿದ ಅರ್ಧ ಭಾಗ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತದೆ.
ವೆಚ್ಚ ಎಷ್ಟಾದರೂ ಸರಿ, ಕೆರೆಯ ಕಾಮಗಾರಿ ಪೂರ್ಣಗೊಳಿಸಿಕೊಡುತ್ತೇನೆ. ನಂತರವಾದರೂ ಇಲ್ಲಿನ ಶಾಸಕರಾದವರು ಮುತುವರ್ಜಿ ವಹಿಸಿ ಈ ಕೆರೆಯನ್ನು ಕಪಿಲಾ ನದಿಯ ನೀರು ತುಂಬುವ ಯೋಜನೆಗೆ ಸೇರಿಸಿ ಈ ಕೆರೆಗೆ ನೀರು ಹರಿಸಲಿ.
-ಸದಾನಂದ
ಮಳೆ ಇಲ್ಲ, ಬೆಳೆ ಇಲ್ಲ. ಕೊಳವೆ ಬಾವಿ ತೋಡಿದರೂ ನೀರು ಮರೀಚಿಕೆಯಾಗುವ ಈ ಪ್ರದೇಶದಲ್ಲಿ ಅಲ್ಪ ಸ್ವಲ್ಪ ಮಳೆ ಬಂದರೂ ಬಿತ್ತುವ ಹುರುಳಿ ಸಾರಂಗ, ಜಿಂಕೆಗಳ ಪಾಲಾಗುತ್ತಿದೆ. ಈ ಕರೆ ಪುನರ್ ನಿರ್ಮಾಣಗೊಂಡು ಅದಕ್ಕೆ ನದಿ ನೀರು ಹರಿದರೆ ಇಲ್ಲಿನ ನೂರಾರು ಎಕರೆ ಭೂಮಿಯಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ. ಅದರ ಶ್ರೇಯಸ್ಸು ಸದಾನಂದ ಅವರದ್ದಾಗಲಿದೆ.
-ಬಸವಣ್ಣ, ಸ್ಥಳೀಯರು.
ಸಿದ್ದರಾಮಯ್ಯನವರು ಇಲ್ಲಿನ ಶಾಸಕರಾಗಿ, ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಬಂದಿದ್ದಾಗ ಗ್ರಾಮಸ್ಥರೆಲ್ಲ ಸೇರಿ ಈ ಕೆರೆ ಅಭಿವೃದ್ಧಿಗಾಗಿ ಮನವಿ ನೀಡಿದ್ದೆವು. ಆದರೆ ಈವರೆಗೂ ಅಭಿವೃದ್ಧಿಯಾಗಿಲ್ಲ. ಈಗ ಸದಾನಂದರು ಸ್ವಂತ ಹಣದಿಂದ ಕೆರೆ ಅಭಿವೃದ್ಧಿ ಕೈಗೊಂಡಿದ್ದಾರೆ. ನದಿ ನೀರು ಬಂದರೆ ಮಾತ್ರ ಸದಾನಂದರ ಕನಸು ನನಸಾಗಲು ಸಾಧ್ಯ. ಹಾಗಾಗಲಿ ಎಂಬುದೇ ಈ ಪುಟ್ಟ ಗ್ರಾಮದ ಜನತೆಯ ಆಶಯ.
-ನಾಗರಾಜ, ಸ್ಥಳೀಯರು.
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…