ಜಿಲ್ಲೆಗಳು

ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತ

ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ ಗಣೇಶ ಹಬ್ಬದೊಳಗೆ ಸಾರ್ವಜನಿಕ ಸೇವೆಗೆ ತೆರವು ಮಾಡಲಾಗುವುದು. ಎಂದು ಪ್ರತಾಪ್ ಸಿಂಹ ಅವರು ಫೇಸ್ಬುಕ್  ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಈ ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ. ರಾಮನಗರ ಚನ್ನಪಟ್ಟಣ ಬೈಪಾಸ್ ಇದೆ 30 ರಿಂದ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆ ಇದೆ.

ಬೈಪಾಸಿನ ಒಂದು ಭಾಗದಲ್ಲಿ ಬೆಟ್ಟ ಕೊರೆಯುವ ಕಾಮಗಾರಿ ವಿಳಂಬ ಆದ ಕಾರಣಕ್ಕೆ ರಸ್ತೆಯನ್ನು ತಡವಾಗಿ ಉದ್ಘಾಟಿಸಲಾಗುತ್ತಿದೆ. ಸದ್ಯ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುವವರು ಈ ಬೈಪಾಸ್ ಬಳಸಬಹುದು.

ಇನ್ನೆರಡು ದಿನದಲ್ಲಿ ಇನ್ನೊಂದು ಬದಿಯನ್ನು ಮುಕ್ತಗೊಳಿಸಲಾಗುತ್ತದೆ. ರಾಮನಗರ ಚನ್ನಪಟ್ಟಣ ಬೈಪಾಸಿನ 23 ಕಿಲೋಮೀಟರ್ ಉದ್ದದ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಅವುಗಳು ಸಹ ಗೌರಿ ಹಬ್ಬದ ವೇಳೆಗೆ ತೆರೆದುಕೊಳ್ಳಲಿದೆ ಸರ್ವಿಸ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago