ಜಿಲ್ಲೆಗಳು

ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತ

ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ ಗಣೇಶ ಹಬ್ಬದೊಳಗೆ ಸಾರ್ವಜನಿಕ ಸೇವೆಗೆ ತೆರವು ಮಾಡಲಾಗುವುದು. ಎಂದು ಪ್ರತಾಪ್ ಸಿಂಹ ಅವರು ಫೇಸ್ಬುಕ್  ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಈ ಬಿಡದಿ ಬೈಪಾಸ್ ಮಂಗಳವಾರದಿಂದ ಏಕಮುಖ ಸಂಚಾರಕ್ಕೆ ಮುಕ್ತವಾಗಿದೆ. ರಾಮನಗರ ಚನ್ನಪಟ್ಟಣ ಬೈಪಾಸ್ ಇದೆ 30 ರಿಂದ ಸಂಚಾರಕ್ಕೆ ಲಭ್ಯವಾಗುವ ಸಾಧ್ಯತೆ ಇದೆ.

ಬೈಪಾಸಿನ ಒಂದು ಭಾಗದಲ್ಲಿ ಬೆಟ್ಟ ಕೊರೆಯುವ ಕಾಮಗಾರಿ ವಿಳಂಬ ಆದ ಕಾರಣಕ್ಕೆ ರಸ್ತೆಯನ್ನು ತಡವಾಗಿ ಉದ್ಘಾಟಿಸಲಾಗುತ್ತಿದೆ. ಸದ್ಯ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುವವರು ಈ ಬೈಪಾಸ್ ಬಳಸಬಹುದು.

ಇನ್ನೆರಡು ದಿನದಲ್ಲಿ ಇನ್ನೊಂದು ಬದಿಯನ್ನು ಮುಕ್ತಗೊಳಿಸಲಾಗುತ್ತದೆ. ರಾಮನಗರ ಚನ್ನಪಟ್ಟಣ ಬೈಪಾಸಿನ 23 ಕಿಲೋಮೀಟರ್ ಉದ್ದದ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಅವುಗಳು ಸಹ ಗೌರಿ ಹಬ್ಬದ ವೇಳೆಗೆ ತೆರೆದುಕೊಳ್ಳಲಿದೆ ಸರ್ವಿಸ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

andolanait

Recent Posts

ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ: ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಿಷ್ಟು.!

ಮಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಅಧಿಕೃತ…

40 mins ago

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್(‌45), ಪ್ರತೀಕ್‌(12) ಮೃತ…

58 mins ago

ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣ ತೋರಿಸಿಕೊಟ್ಟರು: ಸುತ್ತೂರು ಶ್ರೀ ಹಿತವಚನ

ಮೈಸೂರು: ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸುತ್ತೂರು ಮಠಾಧಿಪತಿ ಶ್ರೀ…

1 hour ago

ಮಧ್ಯಪ್ರಾಚ್ಯ ಸಂಘರ್ಷದ ಎಫೆಕ್ಟ್:‌ ಭಾರತದಲ್ಲಿ ಎಲ್‌ಪಿಜಿ ಬಳಕೆ 13% ಕುಸಿತ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ…

1 hour ago

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ: ಬಸನಗೌಡ ಪಾಟೀಲ್‌ ಯತ್ನಾಳ್‌

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ…

2 hours ago

ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣನವರೇ ಕಾರಣರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು…

2 hours ago