ನಾಗನಹಳ್ಳಿ ಗ್ರಾಮದಲ್ಲಿ ೫ ಕೋಟಿ ರೂ. ವೆಚ್ಚದಲ್ಲಿ ಪಕ್ಷಾತೀತವಾಗಿ ನಿರ್ಮಾಣ
ಎಚ್.ಡಿ.ಕೋಟೆ: ಜಾತ್ಯತೀತವಾಗಿ, ಪಕ್ಷಾತೀತವಾಗಿ ಗ್ರಾಮದಲ್ಲಿ ಎಲ್ಲರ ಪರಿಶ್ರಮದಿಂದ ಜಿಲ್ಲೆಯಲ್ಲಿ ದೊಡ್ಡದಾದ ೫ ಕೋಟಿ ರೂ. ವೆಚ್ಚದ ಯೇಸುವಿನ ದೇವಾಲಯವನ್ನು ನಿರ್ಮಿಸಿದ್ದು, ಶುಕ್ರವಾರ ಉದ್ಘಾಟನೆಗೆ ಸಜ್ಜಾಗಿದೆ.
ಪಟ್ಟಣ ಸಮೀಪದ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಅತಿ ಹೆಚ್ಚಾಗಿ ಕ್ರೈಸ್ತ ಸಮುದಾಯದವರು, ಅಲ್ಪಸ್ವಲ್ಪ ಪ್ರಮಾಣದಲ್ಲಿ ಹಿಂದೂ ಸಮುದಾಯದವರು ವಾಸಿಸುತ್ತಿದ್ದಾರೆ.
ರಾಜಕೀಯದಲ್ಲಿ ಪಕ್ಷಗಳ ಮತ್ತು ಮುಖಂಡರುಗಳ ನಡುವೆ ತೀವ್ರ ಪೈಪೋಟಿ ಇದ್ದರೂ ಎಲ್ಲರೂ ಒಗ್ಗಟ್ಟಾಗಿ ಗ್ರಾಮದಲ್ಲಿ ಅತ್ಯುತ್ತಮವಾದ ಮತ್ತು ಬೃಹತ್ತಾದ ಯೇಸುವಿನ ದೇವಾಲಯ ನಿರ್ಮಿಸಿರುವುದು ವಿಶೇಷ.
೨೦೧೧ರಲ್ಲಿ ಚರ್ಚಿನ ಫಾದರ್ ಆಗಿದ್ದ ಮರಿ ಜೋಸೆಫ್ ಈ ಗ್ರಾಮದಲ್ಲಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದ ಯೇಸುವಿನ ದೇವಾಲಯ ನಿರ್ಮಾಣವಾಗಬೇಕೆಂದು ಗ್ರಾಮಸ್ಥರು ಮತ್ತು ಧರ್ಮಧ್ಯಕ್ಷರ ಜೊತೆ ಚರ್ಚಿಸಿ ಅದೇ ಸಾಲಿನಲ್ಲಿ ದೇವಾಲಯ ನಿರ್ಮಾಣಕ್ಕೆ ಧರ್ಮಾಧ್ಯಕ್ಷರಾದ ಥಾಮಸ್ ಅಂತೋನಿ ವಾಳ ಪಿಳ್ಳಿ, ಶಾಸಕರಾಗಿದ್ದ ಬೀಚನಹಳ್ಳಿ ಚಿಕ್ಕಣ್ಣ, ಸಂಸದರಾಗಿದ್ದ ಧ್ರುವನಾರಾಯಣ, ವಿಧಾನ ಪರಿಷತ್ ಸದಸ್ಯರಾಗಿದ್ದ ಸಂದೇಶ್ ನಾಗರಾಜು, ಚಿಕ್ಕಮಾದು, ಸಿದ್ದರಾಜು ಮುಂತಾದವರ ಮೂಲಕ ಅದ್ಧೂರಿಯಾಗಿ ಚಾಲನೆ ನೀಡಲಾಗಿತ್ತು.
ಶಾಸಕರಾಗಿದ್ದ ಬೀಚನಹಳ್ಳಿ ಚಿಕ್ಕಣ್ಣ ೧೦ ಲಕ್ಷ ರೂ., ಚಿಕ್ಕಮಾದು ೫ ಲಕ್ಷ ರೂ., ಅನಿಲ್ ಚಿಕ್ಕಮಾದು ೫ ಲಕ್ಷ ರೂ.ಗಳನ್ನು ನೀಡಿದ್ದರು. ನಾಲ್ಕೂವರೆ ಕೋಟಿ ರೂ.ಗಳನ್ನು ಗ್ರಾಮಸ್ಥರು, ದಾನಿಗಳು, ಮೈಸೂರು ಧರ್ಮ ಕ್ಷೇತ್ರ ಸೇರಿದಂತೆ ಇನ್ನಿತರರ ಮೂಲಕ ಹಂತ ಹಂತವಾಗಿ ಸಂಗ್ರಹಿಸಿ ಕಳೆದ ಹತ್ತು ವರ್ಷಗಳಿಂದ ದೇವಾಲಯದ ಕಾಮಗಾರಿ ನಡೆಸಿದ್ದು, ಈಗ ಪೂರ್ಣಗೊಂಡಿರುವುದರಿಂದ ಡಿ.೩೦ರಂದು ಬೆಳಿಗ್ಗೆ ೧೦ ಗಂಟೆಗೆ ಶುಕ್ರವಾರ ದೇವಾಲಯವನ್ನು ಮಹಾ ಧರ್ಮಾಧ್ಯಕ್ಷರಾದ ಜಾನ್ ಕಾರ್ಡಿನಲ್ ರಿಬಟ್, ಧರ್ಮಾಧ್ಯಕ್ಷರಾದ ಆಂಟೊನಿ ವಿಲಿಯಂ, ಥಾಮಸ್ ಆಂಟೊನಿ, ರೋಸರಿಯೂ, ಸಿಪ್ರಿಯನ್, ಜಾನ್, ಡೊಮೆನಿಕಲ್, ಶಾಸಕರಾದ ಅನಿಲ್ ಚಿಕ್ಕಮಾದು, ಜಿ.ಟಿ.ದೇವೇಗೌಡ, ಸಂಸದ ಶ್ರೀನಿವಾಸಪ್ರಸಾದ್, ಮಾಜಿ ಸಂಸದ ಧ್ರುವನಾರಾಯಣ, ಎಂಎಲ್ಸಿಗಳಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಶಿವಣ್ಣ, ಚಿಕ್ಕಣ್ಣ, ನಾಗನಹಳ್ಳಿ ಚರ್ಚ್ ಫಾದರ್ ಅಂತೋಣಿ ಸ್ವಾಮಿ, ಸಮಿತಿಯವರಾದ ಉಪಕಾರಿ, ಮೆಟ್ರಿನ್, ನಾಗನಹಳ್ಳಿ ಶಾಂತರಾಜು, ನಾಗನಹಳ್ಳಿ ಪ್ರದೀಪ, ಸ್ಟ್ಯಾನಿ, ಅಂತೋಣಿ, ಲಾಜರ್, ಚೋರಪ್ಪ, ಬಾಲರಾಜು, ಗೋಲ್ಡನ್, ಪೆದ್ರು, ಕ್ರೈಸ್ತ ಸಮುದಾಯದವರು ಭಾಗವಹಿಸಲಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…