ಜಿಲ್ಲೆಗಳು

ನಾಳೆ ಬೃಹತ್ ಯೇಸು ದೇವಾಲಯ ಉದ್ಘಾಟನೆ

ನಾಗನಹಳ್ಳಿ ಗ್ರಾಮದಲ್ಲಿ ೫ ಕೋಟಿ ರೂ. ವೆಚ್ಚದಲ್ಲಿ ಪಕ್ಷಾತೀತವಾಗಿ ನಿರ್ಮಾಣ

ಎಚ್.ಡಿ.ಕೋಟೆ: ಜಾತ್ಯತೀತವಾಗಿ, ಪಕ್ಷಾತೀತವಾಗಿ ಗ್ರಾಮದಲ್ಲಿ ಎಲ್ಲರ ಪರಿಶ್ರಮದಿಂದ ಜಿಲ್ಲೆಯಲ್ಲಿ ದೊಡ್ಡದಾದ ೫ ಕೋಟಿ ರೂ. ವೆಚ್ಚದ ಯೇಸುವಿನ ದೇವಾಲಯವನ್ನು ನಿರ್ಮಿಸಿದ್ದು, ಶುಕ್ರವಾರ ಉದ್ಘಾಟನೆಗೆ ಸಜ್ಜಾಗಿದೆ.
ಪಟ್ಟಣ ಸಮೀಪದ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಅತಿ ಹೆಚ್ಚಾಗಿ ಕ್ರೈಸ್ತ ಸಮುದಾಯದವರು, ಅಲ್ಪಸ್ವಲ್ಪ ಪ್ರಮಾಣದಲ್ಲಿ ಹಿಂದೂ ಸಮುದಾಯದವರು ವಾಸಿಸುತ್ತಿದ್ದಾರೆ.
ರಾಜಕೀಯದಲ್ಲಿ ಪಕ್ಷಗಳ ಮತ್ತು ಮುಖಂಡರುಗಳ ನಡುವೆ ತೀವ್ರ ಪೈಪೋಟಿ ಇದ್ದರೂ ಎಲ್ಲರೂ ಒಗ್ಗಟ್ಟಾಗಿ ಗ್ರಾಮದಲ್ಲಿ ಅತ್ಯುತ್ತಮವಾದ ಮತ್ತು ಬೃಹತ್ತಾದ ಯೇಸುವಿನ ದೇವಾಲಯ ನಿರ್ಮಿಸಿರುವುದು ವಿಶೇಷ.
೨೦೧೧ರಲ್ಲಿ ಚರ್ಚಿನ ಫಾದರ್ ಆಗಿದ್ದ ಮರಿ ಜೋಸೆಫ್ ಈ ಗ್ರಾಮದಲ್ಲಿ ಸುಮಾರು ಒಂದೂವರೆ ಕೋಟಿ ರೂ. ವೆಚ್ಚದ ಯೇಸುವಿನ ದೇವಾಲಯ ನಿರ್ಮಾಣವಾಗಬೇಕೆಂದು ಗ್ರಾಮಸ್ಥರು ಮತ್ತು ಧರ್ಮಧ್ಯಕ್ಷರ ಜೊತೆ ಚರ್ಚಿಸಿ ಅದೇ ಸಾಲಿನಲ್ಲಿ ದೇವಾಲಯ ನಿರ್ಮಾಣಕ್ಕೆ ಧರ್ಮಾಧ್ಯಕ್ಷರಾದ ಥಾಮಸ್ ಅಂತೋನಿ ವಾಳ ಪಿಳ್ಳಿ, ಶಾಸಕರಾಗಿದ್ದ ಬೀಚನಹಳ್ಳಿ ಚಿಕ್ಕಣ್ಣ, ಸಂಸದರಾಗಿದ್ದ ಧ್ರುವನಾರಾಯಣ, ವಿಧಾನ ಪರಿಷತ್ ಸದಸ್ಯರಾಗಿದ್ದ ಸಂದೇಶ್ ನಾಗರಾಜು, ಚಿಕ್ಕಮಾದು, ಸಿದ್ದರಾಜು ಮುಂತಾದವರ ಮೂಲಕ ಅದ್ಧೂರಿಯಾಗಿ ಚಾಲನೆ ನೀಡಲಾಗಿತ್ತು.
ಶಾಸಕರಾಗಿದ್ದ ಬೀಚನಹಳ್ಳಿ ಚಿಕ್ಕಣ್ಣ ೧೦ ಲಕ್ಷ ರೂ., ಚಿಕ್ಕಮಾದು ೫ ಲಕ್ಷ ರೂ., ಅನಿಲ್ ಚಿಕ್ಕಮಾದು ೫ ಲಕ್ಷ ರೂ.ಗಳನ್ನು ನೀಡಿದ್ದರು. ನಾಲ್ಕೂವರೆ ಕೋಟಿ ರೂ.ಗಳನ್ನು ಗ್ರಾಮಸ್ಥರು, ದಾನಿಗಳು, ಮೈಸೂರು ಧರ್ಮ ಕ್ಷೇತ್ರ ಸೇರಿದಂತೆ ಇನ್ನಿತರರ ಮೂಲಕ ಹಂತ ಹಂತವಾಗಿ ಸಂಗ್ರಹಿಸಿ ಕಳೆದ ಹತ್ತು ವರ್ಷಗಳಿಂದ ದೇವಾಲಯದ ಕಾಮಗಾರಿ ನಡೆಸಿದ್ದು, ಈಗ ಪೂರ್ಣಗೊಂಡಿರುವುದರಿಂದ ಡಿ.೩೦ರಂದು ಬೆಳಿಗ್ಗೆ ೧೦ ಗಂಟೆಗೆ ಶುಕ್ರವಾರ ದೇವಾಲಯವನ್ನು ಮಹಾ ಧರ್ಮಾಧ್ಯಕ್ಷರಾದ ಜಾನ್ ಕಾರ್ಡಿನಲ್ ರಿಬಟ್, ಧರ್ಮಾಧ್ಯಕ್ಷರಾದ ಆಂಟೊನಿ ವಿಲಿಯಂ, ಥಾಮಸ್ ಆಂಟೊನಿ, ರೋಸರಿಯೂ, ಸಿಪ್ರಿಯನ್, ಜಾನ್, ಡೊಮೆನಿಕಲ್, ಶಾಸಕರಾದ ಅನಿಲ್ ಚಿಕ್ಕಮಾದು, ಜಿ.ಟಿ.ದೇವೇಗೌಡ, ಸಂಸದ ಶ್ರೀನಿವಾಸಪ್ರಸಾದ್, ಮಾಜಿ ಸಂಸದ ಧ್ರುವನಾರಾಯಣ, ಎಂಎಲ್‌ಸಿಗಳಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಶಿವಣ್ಣ, ಚಿಕ್ಕಣ್ಣ, ನಾಗನಹಳ್ಳಿ ಚರ್ಚ್ ಫಾದರ್ ಅಂತೋಣಿ ಸ್ವಾಮಿ, ಸಮಿತಿಯವರಾದ ಉಪಕಾರಿ, ಮೆಟ್ರಿನ್, ನಾಗನಹಳ್ಳಿ ಶಾಂತರಾಜು, ನಾಗನಹಳ್ಳಿ ಪ್ರದೀಪ, ಸ್ಟ್ಯಾನಿ, ಅಂತೋಣಿ, ಲಾಜರ್, ಚೋರಪ್ಪ, ಬಾಲರಾಜು, ಗೋಲ್ಡನ್, ಪೆದ್ರು, ಕ್ರೈಸ್ತ ಸಮುದಾಯದವರು ಭಾಗವಹಿಸಲಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

41 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

1 hour ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

3 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

17 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

21 hours ago