ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟಾ ಶೋರೂಮ್ ಬಳಿ ಕ್ಯಾಂಟರ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ನಗರದ ರಾಜಕುಮಾರ್ ಬಡಾವಣೆಯ ಆಂಟೋನಿಯವರ ಪುತ್ರ ಪಿ.ಎ. ಜಾರ್ಜ್ ವಿಜಯ್ ಕುಮಾರ್ (೫೪) ಎಂಬುವರೇ ಮೃತಪಟ್ಟವರು.
ಬಾಟಾ ಶೋರೂಂ ಬಳಿ ಮಂಗಳವಾರ ರಾತ್ರಿ ಜಾರ್ಜ್ ವಿಜಯ ಕುಮಾರ್ ಅವರು ಬೈಕ್ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ಗೆ ಲಾರಿ ಹಿಂಬದಿಯಿAದ ಗುದ್ದಿದೆ. ಈ ಪರಿಣಾಮ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದಾಗ ಜಾರ್ಜ್ ವಿಜಯ್ ಕುಮಾರ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಮೃತರಿಗೆ ಪತ್ನಿ ಪ್ರೌಢಶಾಲಾ ಶಿಕ್ಷಕಿ ಮೇರಿ ಅನಿತಾ, ಪುತ್ರಿಯರಾದ ಆಂಜಲಿನ್ ಜಾರ್ಜ್, ಆನಿಷ ಜಾರ್ಜ್ ಇದ್ದು, ಹಿರಿಯ ಮಗಳಾದ ಆಂಜಲಿನ್ ಜಾರ್ಜ್ ಜರ್ಮನಿಯಲ್ಲಿ ಎಂಎಸ್ ಮಾಡುತ್ತಿದ್ದು, ಬುಧವಾರ ರಾತ್ರಿ ಮಂಡ್ಯ ನಗರಕ್ಕೆ ಆಗಮಿಸಲಿದ್ದು, ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೊರವಲಯದ ಹೆಬ್ಬಾಳದ ಬಳಿಯಿರುವ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…