ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟಾ ಶೋರೂಮ್ ಬಳಿ ಕ್ಯಾಂಟರ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ನಗರದ ರಾಜಕುಮಾರ್ ಬಡಾವಣೆಯ ಆಂಟೋನಿಯವರ ಪುತ್ರ ಪಿ.ಎ. ಜಾರ್ಜ್ ವಿಜಯ್ ಕುಮಾರ್ (೫೪) ಎಂಬುವರೇ ಮೃತಪಟ್ಟವರು.
ಬಾಟಾ ಶೋರೂಂ ಬಳಿ ಮಂಗಳವಾರ ರಾತ್ರಿ ಜಾರ್ಜ್ ವಿಜಯ ಕುಮಾರ್ ಅವರು ಬೈಕ್ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ಗೆ ಲಾರಿ ಹಿಂಬದಿಯಿAದ ಗುದ್ದಿದೆ. ಈ ಪರಿಣಾಮ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದಾಗ ಜಾರ್ಜ್ ವಿಜಯ್ ಕುಮಾರ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಮೃತರಿಗೆ ಪತ್ನಿ ಪ್ರೌಢಶಾಲಾ ಶಿಕ್ಷಕಿ ಮೇರಿ ಅನಿತಾ, ಪುತ್ರಿಯರಾದ ಆಂಜಲಿನ್ ಜಾರ್ಜ್, ಆನಿಷ ಜಾರ್ಜ್ ಇದ್ದು, ಹಿರಿಯ ಮಗಳಾದ ಆಂಜಲಿನ್ ಜಾರ್ಜ್ ಜರ್ಮನಿಯಲ್ಲಿ ಎಂಎಸ್ ಮಾಡುತ್ತಿದ್ದು, ಬುಧವಾರ ರಾತ್ರಿ ಮಂಡ್ಯ ನಗರಕ್ಕೆ ಆಗಮಿಸಲಿದ್ದು, ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೊರವಲಯದ ಹೆಬ್ಬಾಳದ ಬಳಿಯಿರುವ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…