ಕೊಡಗು : ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರತವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯದಲ್ಲಿಯೇ ನಿಧನವಾಗಿರುವ ಘಟನೆ ಜಿಲ್ಲೆ ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ ನಡೆದಿದೆ.
ಲೋಕೇಶ್ ಎಂಬ ವ್ಯಕ್ತಿಯೇ ನಿಧನರಾದವರು ಇವರು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದು ಕೆಲಸದ ನಿಮಿತ್ತ ಮಡಿಕೇರಿಯಿಂದ ಚೆಟ್ಟಳಿಗೆ ತೆರಳುತ್ತಿದ್ದ ಬೈಕ್ ಹಾಗೂ ಚೆಟ್ಟಳಿಯಿಂದ ಮಡಿಕೇರಿಗೆ ಬರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಡಿಕ್ಕಿಯಾಗಿದ್ದು ಸಾವಿಗೀಡಾಗಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.





