ಜಿಲ್ಲೆಗಳು

ಮದ್ದೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ : ಕಳುವಾಗಿದ್ದ 34 ದ್ವಿಚಕ್ರಗಳ ವಾಹನಗಳ ವಶ

ಮಂಡ್ಯ : ಮದ್ದೂರು ಅಂತರ್ ರಾಜ್ಯಗಳಲ್ಲಿ ಆರೋಪಿ ಬಂಧನ ಸುಮಾರು 16 ಲಕ್ಷ 40,000 ಬೆಲೆ ಬಾಳುವ ವಿವಿಧ ಮಾದರಿಯ 34 ದ್ವಿಚಕ್ರಗಳ ವಾಹನಗಳ ಹೊಸ ಪಡಿಸಿಕೊಳ್ಳುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅಪಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವೇಣುಗೋಪಾಲ್ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ 34 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿರುವುದನ್ನು ಪರಿಶೀಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ಅಪಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ ಆರೋಪಿ ರಾಜೇಶ್ ಎಸ್ ಕುಳ್ಳಾಬಿನ್ ಸಿದ್ದಪ್ಪಾಜಿ 32 ವರ್ಷ ಈತ ವಡ್ಡರಪಾಳ್ಯ ಗ್ರಾಮದವನು ಚಾಮರಾಜನಗರ ಜಿಲ್ಲೆಯ ಈತನು ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ ಚಾಮರಾಜನಗರ ಜಿಲ್ಲಾ ಹಾಗೂ ತಮಿಳು ಗಡಿ ಭಾಗದ ಗ್ರಾಮಗಳಲ್ಲಿ ಬೈಕ್ಗಳನ್ನ ಕಳ್ಳತನ ಮಾಡಿ ಸಿಕ್ಕಷ್ಟು ಹಣಕ್ಕೆ ಮಾರಾಟ ಮಾಡಿ ಓಡಾಡುತ್ತಿದ್ದನು.

ಮದ್ದೂರು ಪಟ್ಟಣದ ಬಸ್ ನಿಲ್ದಾಣದ ಹೆದ್ದಾರಿಯಲ್ಲಿ ನಾಮಫಲಕ ಇಲ್ಲದ ಬೈಕಿನ ಮೇಲೆ ಕುಳಿತಿದ್ದು ಗಸ್ತಿನಲ್ಲಿದ್ದ ನಮ್ಮ ಪೊಲೀಸರು ಅನುಮಾನ ದಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾನು ಬೈಕುಗಳನ್ನ ಕದ್ದಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಆ ಮೋಟರ್ ಸೈಕಲ್ ಗಳನ್ನ ವಿವಿಧ ಪೊಲೀಸ್ ಠಾಣೆ ಸರತಿನಲ್ಲಿ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದು.

ಆ ಬೈಕುಗಳನ್ನ ವಶಪಡಿಸಿಕೊಂಡು ಅದರ ವೆಚ್ಚ ಸುಮಾರು 16 ಲಕ್ಷ 40,000 ಬೆಲೆಬಾಳುವ 34 ಮೋಟರ್ ಸೈಕಲ್ ಆಗಿದ್ದು ಅವುಗಳನ್ನು ಅಮಾನತ್ತು ಪಡಿಸಿಕೊಂಡಿದ್ದು ಸಂಬಂಧಪಟ್ಟ ಮಾಲೀಕರುಗಳಿಗೆ ವಿಚಾರ ತಿಳಿಸಲಾಗಿದೆ ಎಂದರು.

ಮಳವಳ್ಳಿ ಉಪ್ಪ ವಿಭಾಗದ ಪೊಲೀಸ್ ಉಪಾಧ್ಯಕ್ಷರಾದ ನವೀನ್ ಕುಮಾರ್ ಮಾರ್ಗದರ್ಶನದ ಮೇರೆಗೆ ಪಟ್ಟಣದ ಸಿಪಿಐ ಸಂತೋಷ್ ಪಿಎಸ್ಐಗಳಾದ ನರೇಶ್ ಕುಮಾರ್ ಉಮೇಶ್ ರವಿ. ಪೋಲಿಸ್ ಗಳಾದ ಗಿರೀಶ್ ಗುರುಪ್ರಸಾದ್ ಪರಮಾನಂದ ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ ಪ್ರಶಂತಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇವರಿಗೆ ಕರ್ತವ್ಯ ನಿಷ್ಠೆ ಹಾಗೂ ಕಳ್ಳತನ ಬೇಧಿಸುವಲ್ಲಿ ಯಶಸ್ವಿಯಾಗಿ ಸನ್ಮಾನ ಹಾಗೂ ಪ್ರಶಸ್ತಿಗಳನ್ನು ನೀಡಲು ಶಿಫಾರಸು ಮಾಡಲಾಗುತ್ತದೆ ಎಂದರು.

andolanait

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

1 hour ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

1 hour ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

1 hour ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

1 hour ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago