ಚಾಮರಾಜನಗರ: ತಾಲ್ಲೂಕಿನ ಬಿಸಲ್ವಾಡಿಯ ಬಿಳಿ ಕಲ್ಲು ಕ್ವಾರಿಯಲ್ಲಿ ಸೋಮವಾರ ಕುಳಿ ತೆಗೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ರೇಣುಕಾದೇವಿ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ. ಕುಮಾರ್ (28), ಶಿವರಾಜು (35) ಹಾಗೂ ಸಿದ್ದರಾಜು (27) ಮೃತಪಟ್ಟವರು. ಮೂವರೂ ಕಾಗಲವಾಡಿ ಮೋಳೆಯವರು. ಕಾರ್ಮಿಕರೊಬ್ಬರು ಕ್ವಾರಿಯ ಗೋಡೆಯ ಮಧ್ಯದಲ್ಲಿ ಕುಳಿ ಹೊಡೆಯುತ್ತಿದ್ದರು. ಇನ್ನಿಬ್ಬರು ಕೆಳಗಡೆ ನಿಂತು ಅವರಿಗೆ ನೆರವಾಗುತ್ತಿದ್ದರು. ಈ ಸಂದರ್ಭದಲ್ಲಿ ಗುಡ್ಡ ಕುಸಿದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರು ತೀವ್ರವಾಗಿ ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…