ಜಿಲ್ಲೆಗಳು

ಬಿಳುಗಲಿ ಕೊಲೆ ಪ್ರಕರಣವನ್ನು CBIಗೆ ವಹಿಸಿ

ಚಾಮರಾಜನಗರ: ನಂಜನಗೂಡು ತಾಲ್ಲೂಕಿನ ಬಿಳುಗಲಿ ಗ್ರಾಮದ ತಾಯಿ-ಮಗಳ ಕೊಲೆ ಪ್ರಕರಣವನ್ನು ಮೈಸೂರು ಜಿಲ್ಲಾಡಳಿತ ಮತ್ತು ಪೊಲೀಸರು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸಮಾಜವಾದಿ ಜನತಾ ಪಕ್ಷದ ಅಧ್ಯಕ್ಷ ಜಿ.ಎಂ.ಗಾಡ್ಕರ್ ಆಗ್ರಹಿಸಿದ್ದಾರೆ.

೧೨೬ ದಿನಗಳ ಹಿಂದೆ ಗ್ರಾಮದ ಪುಟ್ಟರಂಗಮ್ಮ ಮತ್ತು ಆಕೆಯ ಮಗಳು ಮಣಿ ಎಂಬುವರ ಮೇಲೆ ಗುಂಪೊoದು ಹಲ್ಲೆ ಮಾಡಿದ್ದಲ್ಲದೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದೆ. ಬಳಿಕ ಇಬ್ಬರ ಶವವನ್ನು ಸೀರೆಯಿಂದ ಒಟ್ಟಿಗೆ ಬಿಗಿದು ಸಮೀಪದಲ್ಲಿದ್ದ ನೀರಿನ ಹಳ್ಳಕ್ಕೆ ಎಸೆದು ಹತ್ಯೆ ಮಾಡಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕೊಲೆಯಾದ ೫ ದಿನಗಳ ನಂತರ ತಾಯಿ-ಮಗಳ ದೇಹ ಮೇಲೆದ್ದವು. ವಿಷಯ ತಿಳಿದ ಸ್ಥಳೀಯ ಪೊಲೀಸರು ಮೃತ ದೇಹಗಳನ್ನು ತಹಶೀಲ್ದಾರ್ ಅವರಿಂದ ಮಹಜರು ಮಾಡಿಸಲಿಲ್ಲ. ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸದೆ ಆತುರದಲ್ಲಿ ಸುಟ್ಟು ಹಾಕಿದ್ದಾರೆ. ಈ ಭಯಾನಕ ಕೊಲೆ ಪ್ರಕರಣದ ಬಗ್ಗೆ ಪೊಲೀಸ್ ಕ್ರೈಂ ನ್ಯೂಸ್‌ಗೂ ಪ್ರಕಟಣೆಗೂ ನೀಡದೆ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ದೂರಿದರು.
ಈ ಪ್ರಕರಣವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತ ಕುಮಾರ ಎಂಬಾತನ ನೇತೃತ್ವದಲ್ಲಿ ಸುಟ್ಟು ಹಾಕಲಾಗಿದೆ. ಇಲ್ಲಿಯ ತನಕ ಡಿವೈಎಸ್ಪಿ ಗೋವಿಂದರಾಜು, ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ ತಳವಾರ್, ಎಸ್‌ಐ. ಆರತಿ ಅವರು ಒಬ್ಬ ಆರೋಪಿಯನ್ನು ಬಂಧಿಸಿಲ್ಲ ಎಂದು ಆಪಾದಿಸಿದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago