ಜಿಲ್ಲೆಗಳು

ಬಿಜೆಪಿಯು ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ : ಸಿದ್ದರಾಮಯ್ಯ

ಮೈಸೂರು : ಬಿಜೆಪಿ ಸರ್ಕಾದ ದುರಾಡಳಿತದಿಂದಾಗಿ ಕರ್ನಾಟಕದಲ್ಲಿ ಈಗ ಶಾಂತಿಯು ಮನೆ ಮಾಡಿಲ್ಲ, ಕುವೆಂಪು ಅವರ ಸ್ವಜನಾಂಗದ ಶಾಂತಿಯ ತೋಟ ಎಂಬ ಅವರ ಮಾತಿಗೆ ಹಿನ್ನಡೆಯಾಗಿದೆ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರವನ್ನು ಹೊರಹಾಕಿದ್ದಾರೆ.

ನಗರದಲ್ಲಿಂದು ಕಾಂಗ್ರೆಸ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಭಾರತ ಜೋಡೋ ಪಾದ ಯಾತ್ರೆಯ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನುಷ್ಯರಾಗಿ ಬಾಳುವುದನ್ನು ನಮಗೆ ಸಂವಿಧಾನ ಹೇಳಿಕೊಟ್ಟಿದೆ.ಇಲ್ಲಿ ಎಲ್ಲಾ ಧರ್ಮದವರೂ ಒಂದೇ ಆದರೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್‌ ಪಡೆದುಕೊಂಡಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದರು.

ಭಾರತ್‌ ಜೋಡೋ ಯಾತ್ರೆಯು ಅ. 1ನೇ ತಾರೀಖಿನಂದು ಜಿಲ್ಲೆಯನ್ನು ಪ್ರವೇಶ ಮಾಡಲಿದ್ದು, 2ನೇ ತಾರೀಖಿನಂದು ನಂಜನಗೂಡಿನ ಬದನವಾಳು ಗ್ರಾಮಕ್ಕೆ ಕಾಂಗ್ರೆಸ್‌ನಾಯಕ ರಾಹುಲ್‌ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಇಲ್ಲಿ ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುವುದು. ಬಳಿಕ ಯಾತ್ರೆಯು ಕಡಕೊಳದಿಂದ ಮೈಸೂರಿನ ಅರಮನೆಯವರೆಗೆ ಸಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿಅಧ್ಯಕ್ಷ ಡಿಕೆ ಶಿವಕುಮಾರ್‌, ಕಾರ್ಯಾಧ್ಯಕ್ಷ ಧ್ರುವನಾರಾಯಣ,ಮಾಜಿ ಸಚಿವರಾದ ಮಹದೇವಪ್ಪ, ,ಕೆ.ವೆಂಕಟೇಶ್, ತನ್ವೀರ್ ಸೇಠ್, ವಿನಯ್ ಕುಮಾರ್ ಸೊರಕೆ, ಶಾಸಕರಾದ ಡಾ.ತಿಮ್ಮಯ್ಯ,ಅನಿಲ್ ಚಿಕ್ಕಮಾದು, ಸೇರಿದಂತೆ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago