ಜಿಲ್ಲೆಗಳು

ಬಿಜೆಪಿ ತೊರೆದು ತೆನೆ ಪಕ್ಷಕ್ಕೆ ಸೇರ್ಪಡೆ

ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ ಮುಖಂಡ ಎಮ್ ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಗರ ಕೋಟಾಯಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾದಳ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂದಿನ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಪಂಚ ರತ್ನ ಕಾರ್ಯಕ್ರಮದ ಹಮ್ಮಿಕೊಂಡಿದ್ದಾರೆ.ಈ ಕಾರ್ಯಕ್ರಮಗಳಿಂದ ಎಲ್ಲ ಸಮಾಜದ ಹಾಗೂ ಬಡವರಿಗೆ ಅನುಕೂಲವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 15 ದಿನಗಳಲ್ಲಿ 44,457 ಮತಗಳನ್ನು ನೀಡುವ ಮೂಲಕ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದೀರಿ, ನಿಮ್ಮ ಈ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಪರಾಭವ ಗೊಂಡರು ಸಹ ಎದೆಗುಂದದೆ ನಿಮ್ಮ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿದ್ದೇನೆ.


ಕ್ಷೇತ್ರ ವ್ಯಾಪ್ತಿಯಲ್ಲಿನ ಬಡವರು ನಿರ್ಗತಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ನನ್ನ ಕೈಲಾದ ಸೇವೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟರೆ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ಕೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರುಗಳು ನಮಗೆ ನೀವು ಯಾವುದೇ ಅನುಕೂಲ ಕಲ್ಪಿಸದಿದ್ದರೂ ಪರವಾಗಿಲ್ಲ ನಮ್ಮ ಗ್ರಾಮಕ್ಕೆ ರಸ್ತೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿಕೊಂಡರು.

ಮುಖಂಡರುಗಳಾದ ಮಹದೇವಸ್ವಾಮಿ ಭಾಗ್ಯರಾಜ್ ಪುಟ್ಟ ತಂಬಡಿ ಮಾದಯ್ಯ ತಂಬಡಿ ಬಸವರಾಜ್ ಮಹೇಶ್ ಪ್ರಸಾದ್ ನಾಗರಾಜ್ ಈರಣ್ಣ ಮಾದಯ್ಯ, ಶಿವಕುಮಾರ್ ರಾಮಪ್ಪ ಜಯಮ್ಮ ರಾಜಮ್ಮ ಸುಗಣ್ಯ ಚಿನ್ನ ತಾಯಿ ಸಗಾಯಿ ಮೇರಿ ಮಾರಮ್ಮ ರಾಜಮ್ಮ ರಾಣಿ ಕೆಂಪಮ್ಮ ಸಿದ್ದರಾಜು ರತ್ನಮ್ಮ ಪುಟ್ಟಮ್ಮ ಮಾದೇವಿ ಶಾಕಿ ರಾಣಿ ಚಿಕ್ಕತಾಯಿ ಚಿಕ್ಕಮ್ಮ ಮಾದಮ್ಮ ಸೇರಿದಂತೆ ಎಲ್ಲಿದ್ದರೂ ಬಿಜೆಪಿ ಪಕ್ಷ ತೊರೆದು ಜಾದಳ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ ಜಿ ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ,ತಾಪಂ ಮಾಜಿ ಸದಸ್ಯ ಮಣಿ, ಗ್ರಾಪಂ ಸದಸ್ಯ ಅರುಳ್ ಸೆಲ್ವಮ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago