ಜಿಲ್ಲೆಗಳು

ಬಿಜೆಪಿ ತೊರೆದು ತೆನೆ ಪಕ್ಷಕ್ಕೆ ಸೇರ್ಪಡೆ

ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ ಮುಖಂಡ ಎಮ್ ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಗರ ಕೋಟಾಯಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾದಳ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂದಿನ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಪಂಚ ರತ್ನ ಕಾರ್ಯಕ್ರಮದ ಹಮ್ಮಿಕೊಂಡಿದ್ದಾರೆ.ಈ ಕಾರ್ಯಕ್ರಮಗಳಿಂದ ಎಲ್ಲ ಸಮಾಜದ ಹಾಗೂ ಬಡವರಿಗೆ ಅನುಕೂಲವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 15 ದಿನಗಳಲ್ಲಿ 44,457 ಮತಗಳನ್ನು ನೀಡುವ ಮೂಲಕ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದೀರಿ, ನಿಮ್ಮ ಈ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಪರಾಭವ ಗೊಂಡರು ಸಹ ಎದೆಗುಂದದೆ ನಿಮ್ಮ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿದ್ದೇನೆ.


ಕ್ಷೇತ್ರ ವ್ಯಾಪ್ತಿಯಲ್ಲಿನ ಬಡವರು ನಿರ್ಗತಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ನನ್ನ ಕೈಲಾದ ಸೇವೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟರೆ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ಕೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರುಗಳು ನಮಗೆ ನೀವು ಯಾವುದೇ ಅನುಕೂಲ ಕಲ್ಪಿಸದಿದ್ದರೂ ಪರವಾಗಿಲ್ಲ ನಮ್ಮ ಗ್ರಾಮಕ್ಕೆ ರಸ್ತೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿಕೊಂಡರು.

ಮುಖಂಡರುಗಳಾದ ಮಹದೇವಸ್ವಾಮಿ ಭಾಗ್ಯರಾಜ್ ಪುಟ್ಟ ತಂಬಡಿ ಮಾದಯ್ಯ ತಂಬಡಿ ಬಸವರಾಜ್ ಮಹೇಶ್ ಪ್ರಸಾದ್ ನಾಗರಾಜ್ ಈರಣ್ಣ ಮಾದಯ್ಯ, ಶಿವಕುಮಾರ್ ರಾಮಪ್ಪ ಜಯಮ್ಮ ರಾಜಮ್ಮ ಸುಗಣ್ಯ ಚಿನ್ನ ತಾಯಿ ಸಗಾಯಿ ಮೇರಿ ಮಾರಮ್ಮ ರಾಜಮ್ಮ ರಾಣಿ ಕೆಂಪಮ್ಮ ಸಿದ್ದರಾಜು ರತ್ನಮ್ಮ ಪುಟ್ಟಮ್ಮ ಮಾದೇವಿ ಶಾಕಿ ರಾಣಿ ಚಿಕ್ಕತಾಯಿ ಚಿಕ್ಕಮ್ಮ ಮಾದಮ್ಮ ಸೇರಿದಂತೆ ಎಲ್ಲಿದ್ದರೂ ಬಿಜೆಪಿ ಪಕ್ಷ ತೊರೆದು ಜಾದಳ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ ಜಿ ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ,ತಾಪಂ ಮಾಜಿ ಸದಸ್ಯ ಮಣಿ, ಗ್ರಾಪಂ ಸದಸ್ಯ ಅರುಳ್ ಸೆಲ್ವಮ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

14 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

16 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

19 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

19 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

20 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

20 hours ago