ಜಿಲ್ಲೆಗಳು

ಬಿಜೆಪಿ ತೊರೆದು ತೆನೆ ಪಕ್ಷಕ್ಕೆ ಸೇರ್ಪಡೆ

ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್‍ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ ಮುಖಂಡ ಎಮ್ ಆರ್ ಮಂಜುನಾಥ್ ತಿಳಿಸಿದರು.

ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಗರ ಕೋಟಾಯಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾದಳ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂದಿನ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಪಂಚ ರತ್ನ ಕಾರ್ಯಕ್ರಮದ ಹಮ್ಮಿಕೊಂಡಿದ್ದಾರೆ.ಈ ಕಾರ್ಯಕ್ರಮಗಳಿಂದ ಎಲ್ಲ ಸಮಾಜದ ಹಾಗೂ ಬಡವರಿಗೆ ಅನುಕೂಲವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 15 ದಿನಗಳಲ್ಲಿ 44,457 ಮತಗಳನ್ನು ನೀಡುವ ಮೂಲಕ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದೀರಿ, ನಿಮ್ಮ ಈ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಪರಾಭವ ಗೊಂಡರು ಸಹ ಎದೆಗುಂದದೆ ನಿಮ್ಮ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿದ್ದೇನೆ.


ಕ್ಷೇತ್ರ ವ್ಯಾಪ್ತಿಯಲ್ಲಿನ ಬಡವರು ನಿರ್ಗತಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ನನ್ನ ಕೈಲಾದ ಸೇವೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟರೆ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ಕೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರುಗಳು ನಮಗೆ ನೀವು ಯಾವುದೇ ಅನುಕೂಲ ಕಲ್ಪಿಸದಿದ್ದರೂ ಪರವಾಗಿಲ್ಲ ನಮ್ಮ ಗ್ರಾಮಕ್ಕೆ ರಸ್ತೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿಕೊಂಡರು.

ಮುಖಂಡರುಗಳಾದ ಮಹದೇವಸ್ವಾಮಿ ಭಾಗ್ಯರಾಜ್ ಪುಟ್ಟ ತಂಬಡಿ ಮಾದಯ್ಯ ತಂಬಡಿ ಬಸವರಾಜ್ ಮಹೇಶ್ ಪ್ರಸಾದ್ ನಾಗರಾಜ್ ಈರಣ್ಣ ಮಾದಯ್ಯ, ಶಿವಕುಮಾರ್ ರಾಮಪ್ಪ ಜಯಮ್ಮ ರಾಜಮ್ಮ ಸುಗಣ್ಯ ಚಿನ್ನ ತಾಯಿ ಸಗಾಯಿ ಮೇರಿ ಮಾರಮ್ಮ ರಾಜಮ್ಮ ರಾಣಿ ಕೆಂಪಮ್ಮ ಸಿದ್ದರಾಜು ರತ್ನಮ್ಮ ಪುಟ್ಟಮ್ಮ ಮಾದೇವಿ ಶಾಕಿ ರಾಣಿ ಚಿಕ್ಕತಾಯಿ ಚಿಕ್ಕಮ್ಮ ಮಾದಮ್ಮ ಸೇರಿದಂತೆ ಎಲ್ಲಿದ್ದರೂ ಬಿಜೆಪಿ ಪಕ್ಷ ತೊರೆದು ಜಾದಳ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ ಜಿ ಪಂ ಮಾಜಿ ಉಪಾಧ್ಯಕ್ಷ ಶಿವಮೂರ್ತಿ,ತಾಪಂ ಮಾಜಿ ಸದಸ್ಯ ಮಣಿ, ಗ್ರಾಪಂ ಸದಸ್ಯ ಅರುಳ್ ಸೆಲ್ವಮ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

51 mins ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

3 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

6 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

6 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

8 hours ago

ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…

8 hours ago