ಹನೂರು ( ಮಾರ್ಟಳ್ಳಿ): ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್ಡಿ ಕುಮಾರಸ್ವಾಮಿರವರ ಜನಪರ ಆಡಳಿತ ನೋಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಜಾದಳ ಸೇರ್ಪಡೆಯಾಗುತ್ತಿರುವುದು ಸಂತಸದ ವಿಚಾರ ಎಂದು ಜಾದಳ ಮುಖಂಡ ಎಮ್ ಆರ್ ಮಂಜುನಾಥ್ ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರು ಪಂಚ ರತ್ನ ಕಾರ್ಯಕ್ರಮದ ಹಮ್ಮಿಕೊಂಡಿದ್ದಾರೆ.ಈ ಕಾರ್ಯಕ್ರಮಗಳಿಂದ ಎಲ್ಲ ಸಮಾಜದ ಹಾಗೂ ಬಡವರಿಗೆ ಅನುಕೂಲವಾಗಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 15 ದಿನಗಳಲ್ಲಿ 44,457 ಮತಗಳನ್ನು ನೀಡುವ ಮೂಲಕ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದೀರಿ, ನಿಮ್ಮ ಈ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಪರಾಭವ ಗೊಂಡರು ಸಹ ಎದೆಗುಂದದೆ ನಿಮ್ಮ ಕಷ್ಟ ಸುಖಗಳಲ್ಲಿ ಸದಾ ಭಾಗಿಯಾಗಿದ್ದೇನೆ.
ಕ್ಷೇತ್ರ ವ್ಯಾಪ್ತಿಯಲ್ಲಿನ ಬಡವರು ನಿರ್ಗತಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತರಬೇತಿ ಶಿಬಿರಗಳನ್ನು ಹಮ್ಮಿಕೊಂಡು ನನ್ನ ಕೈಲಾದ ಸೇವೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟರೆ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ಕೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖಂಡರುಗಳು ನಮಗೆ ನೀವು ಯಾವುದೇ ಅನುಕೂಲ ಕಲ್ಪಿಸದಿದ್ದರೂ ಪರವಾಗಿಲ್ಲ ನಮ್ಮ ಗ್ರಾಮಕ್ಕೆ ರಸ್ತೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿಕೊಂಡರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…