ಹನೂರು: ಮಲೆಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ 29 ಬಿಜೆಪಿ ಬೆಂಬಲಿತ ಸದಸ್ಯರು ಒಗ್ಗಟ್ಟಾಗಿದ್ದೇವೆ ಕೆಲವೊಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಮ,ಬೆಟ್ಟ ಗ್ರಾಪಂ ಅಧ್ಯಕ್ಷ ಕುಮಾರ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಿದ್ದೇವೆ.ಇವರ ಸಹಕಾರದಿಂದ 29
ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದೇವೆ. ಆಂತರಿಕ ಒಪ್ಪಂದದಂತೆ ಹದಿನೈದು ತಿಂಗಳ ಅವಧಿ ನನಗೆ ಅಧ್ಯಕ್ಷ ಸ್ಥಾನ ನಿಗದಿಪಡಿಸಲಾಗಿತ್ತು. ತದನಂತರ ರಾಜಿನಾಮೆಯನ್ನು ಸಹ ನೀಡಿದ್ದೆ ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ರಾಜೀನಾಮೆ ವಾಪಸ್ ಪಡೆದುಕೊಂಡೆ,ಆ ನಂತರ ಕೆಲವರು ಅವಿಶ್ವಾಸ ಮಂಡನೆಗೆ ಉಪವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದರು.ಆದರೆ ಕಾಂಗ್ರೆಸ್ ಬೆಂಬಲಿತ ಸದಸ್ಯರು ಸೇರಿದಂತೆ ಎಲ್ಲ ಸದಸ್ಯರು ನನಗೆ ಬೆಂಬಲ ನೀಡುವುದಾಗಿ ತಿಳಿಸಿ ನನಗೆ ಸಹಕಾರ ನೀಡಿದ್ದಾರೆ .ನಾನು ವಿಶ್ವಾಸ ಮಂಡಿಸಿದ್ದೇನೆ ಎಂದು ತಿಳಿಸಿದರು.
ಗ್ರಾಪಂ ಸದಸ್ಯ ಶರವಣ ಮಾತನಾಡಿ ನಾವು ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತಿದ್ದೇವೆ. ಆದರೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ನಮ್ಮ ಒಗ್ಗಟ್ಟನ್ನು ಮುರಿಯಲು ಯತ್ನಿಸುತ್ತಿದ್ದಾರೆ ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಾವು ಜನಧ್ವನಿ ಬಿ ವೆಂಕಟೇಶ್ ರವರ ಮಾರ್ಗದರ್ಶನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ .ಅವರು ಯಾರನ್ನೂ ಸಹ ಎತ್ತಿಕಟ್ಟಿಲ್ಲ ಇದೆಲ್ಲ ಊಹಾಪೋಹ ಯಾರೂ ಸಹ ಇದಕ್ಕೆ ಕಿವಿಗೊಡಬಾರದು, ನಾವು ಒಂದೇ ಬಣ ಅದು ಜನಧ್ವನಿ ಬಿ ವೆಂಕಟೇಶ್ ಅವರ ಬಣ ಎಂದು ಸ್ಪಷ್ಟನೆ ನೀಡಿದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…