ಜಿಲ್ಲೆಗಳು

ಮತದಾರರ ಮಾಹಿತಿ ಡಿಲೀಟ್ ಮಾಡಿಸಿ ಸಿದ್ದರಾಮಯ್ಶರನ್ನು ಸೋಲಿಸಲು ಬಿಜೆಪಿ ಪ್ಲಾನ್ : ಬಿ.ಸುಬ್ರಹ್ಮಣ್ಯ

ಮೈಸೂರು: ಸಿದ್ದರಾಮಯ್ಶ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಬಿಜೆಪಿ ಕಾತುರದಿಂದ ಕಾಯುತ್ತಿದ್ದದ್ದು ಏಕೆ ಎಂಬುದು ಈಗ ಸ್ಪಷ್ಟವಾಗಿದೆ. ಸಿದ್ದರಾಮಯ್ಶ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿ ಮತದಾರರ ಮಾಹಿತಿ ಡಿಲೀಟ್ ಮಾಡಿಸಿ ಅವರನ್ನು ಸೋಲಿಸಲು ಪ್ಲ್ಯಾನ್ ಮಾಡಿತ್ತು ಎಂಬ ಅನುಮಾನ ವ್ಯಕ್ಯವಾಗುತ್ತಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬಿಜೆಪಿ ಸಿದ್ದರಾಮಯ್ಯ ಅವರೇ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೀರಿ ಎಂದು ಪದೇ ಪದೇ ಕೇಳುತ್ತಿತ್ತು. ಇದೀಗ ಬೆಂಗಳೂರಿನ ಹಲವು ಕ್ಷೇತ್ರಗಳಲ್ಲಿ ಮತದಾರರ ಹೆಸರು ಪಟ್ಟಿಯಿಂದಲೇ ನಾಪತ್ತೆಯಾಗಿರುವುದನ್ನು ನೋಡಿದರೇ, ಬಿಜೆಪಿ ಅದಕ್ಕಾಗಿಂ ಸಿದ್ದರಾಮಂ ಅವರನ್ನು ಎಲ್ಲಿ ಸ್ಪರ್ಧಿಸುತ್ತೀರಿ ಎಂಬುದನ್ನು ಕೇಳುತ್ತಿತ್ತು ಅನ್ನಿಸುತ್ತಿದೆ. ಅಲ್ಲದೇ ಕಳೆದ ಲೋಕಸಭಾ ಚುನಾವಣೆಂಲ್ಲಿ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ ಅವರ ಸೋಲಿಗೂ ಇದೇ ಕಾರಣವಾ? ಅನ್ನೋ ಸಂಶಯ ವ್ಯಕ್ತವಾಗುತ್ತಿದೆ.

ಮತದಾರರ ಪಟ್ಟಿ ಕಳವು ಪ್ರಕರಣದಲ್ಲಿ ರಾಜಕಾರಣಿಗಳು ಕೂಡ ಇದರಲ್ಲಿ ಶಾಮಿಲಾಗಿರುವುದು ಈಗಾಗಲೇ ಬಂಲಾಗಿದೆ. ಸುಮಾರು ೨೦ಕ್ಕೂ ಹೆಚ್ಚು ಪ್ರಭಾವಿ ರಾಜಕಾರಣಿಗಳಿಗೆ ಇ- ಮೇಲ್ ಮಾಡಿದ್ದು ಅದರಲ್ಲಿ, ಸರ್ವೇ ಮಾಡಿ ನಿಮಗೆ ಸಹಾಂ ಮಾಡ್ತೀವಿ. ನಮ್ಮ ಕೆಲಸಕ್ಕೆ ಇಂತಿಷ್ಟು ದುಡ್ಡು ತೆಗೆದುಕೊಳ್ತೀವಿ ಎಂದು ತಿಳಿಸಲಾಗಿದೆ. ಇದಕ್ಕೆ ಒಂದಷ್ಟು ರಾಜಕಾರಣಿಗಳು ಕೂಡ ರಿಪ್ಲೆ ಮಾಡಿದ್ದಾರೆ ಎಂಬ ವಿಚಾರ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿವೆ. ಅಲ್ಲದೇ ಬಿಜೆಪಿ ಸಚಿವರ ಖಾಲಿ ಚೆಕ್ ಸಿಕ್ಕಿದೆ. ದುಡ್ಡು ಸಹ ಸಿಕ್ಕಿದೆ ಅನ್ನೊ ಮಾಹಿತಿಯಿದೆ. ಮಂತ್ರಿಂ ದುಡ್ಡು, ಚೆಕ್ ಅಲ್ಲಿ ಏಕೆ ಸಿಕ್ತು? ಆ ಮಂತ್ರಿಯನ್ನು ಇಟ್ಟುಕೊಂಡು ಂವ ತನಿಖೆ ನಡೆಸುತ್ತೀರಿ? ಮುಖ್ಯಮಂತ್ರಿಗಳು ಪ್ರಾಮಾಣಿಕವಾಗಿದ್ದೀವಿ ಅನ್ನೋದಾದ್ರೆ ಇದನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಅಲ್ಲದೇ ಚೆಕ್ ಪತ್ತೆಯಾಗಿರುವ ಬಿಜೆಪಿ ಸಚಿವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಆದ್ದರಿಂದ ಸಿದ್ದರಾಮಯ್ಯನವರು ಮತ್ತು ಅವರ ಅನುಂಯಿಗಳು ಸ್ಪರ್ಧಿಸುವ ಕ್ಷೇತ್ರದಲ್ಲಿ ಅವರ ಅಭಿಮಾನಿಗಳು ಈಗಿನಿಂದಲೇ ಎಚ್ಚರಿಕೆಯಿಂದ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಎಚ್ಚೆತ್ತುಕೊಳ್ಳಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪರವಾಗಿ ಬಿ.ಸುಬ್ರಹ್ಮಣ್ಯ ಮನವಿ ಮಾಡಿದ್ದಾರೆ.

andolana

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

58 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

1 hour ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

1 hour ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

1 hour ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

12 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

12 hours ago