ಜಿಲ್ಲೆಗಳು

ಸೋನಿಯಾ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ

ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಗೋವಾದಲ್ಲಿ ನಡೆದ ವಿಧಾನ ಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕರ್ನಾಟಕ ರಾಜ್ಯಕ್ಕೆ ಒಂದು ಹನಿ ನೀರನ್ನೂ ಮಹದಾಯಿ ನದಿಯಿಂದ ಕೊಡಬೇಡಿ ಎಂದು ಹೇಳಿಕೆ ನೀಡುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಅಪಮಾನ ಮಾಡಿದ್ದರು. ಈಗ ಮಂಡ್ಯದಲ್ಲಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಹನಿ ನೀರನ್ನೂ ಕೊಡಬೇಡಿ ಎಂದಿದ್ದ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಮಂಡ್ಯದಲ್ಲೇ ಬಿಸ್ಲರಿ ವಾಟರನ್ನು ನೀಡುತ್ತೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳನ್ನೂ ಸರಿಯಾಗಿ ಕೊಂಡೊಯ್ಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರು ಉದಾರತೆಯನ್ನು ಮೆರೆಯಬೇಕು. ಅದನ್ನು ಬಿಟ್ಟು ಒಡೆದು ಆಳುವ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದ ಸೋನಿಯಾಗಾಂಧಿ ಅವರ ವಿರುದ್ಧ ನಾವು ಪೋಸ್ಟರ್ ಅಭಿಯಾನ ಮಾಡುತ್ತಿದ್ದೇವೆ. ಇಂತಹ ಜನವಿರೋಧಿ ಹೇಳಿಕೆ ನೀಡಿರುವ ನಿಮಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ರಾಜ್ಯದಲ್ಲಿ ಪಾದಯಾತ್ರೆ ನಡೆಸುವ ನೈತಿಕತೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.

ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಹನಿಯಂಬಾಡಿ ನಾಗರಾಜು, ಮಾದರಾಜ ಅರಸ್ ಇತರರು ಪೋಸ್ಟರ್ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

 

 

 

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago