ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಗೋವಾದಲ್ಲಿ ನಡೆದ ವಿಧಾನ ಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕರ್ನಾಟಕ ರಾಜ್ಯಕ್ಕೆ ಒಂದು ಹನಿ ನೀರನ್ನೂ ಮಹದಾಯಿ ನದಿಯಿಂದ ಕೊಡಬೇಡಿ ಎಂದು ಹೇಳಿಕೆ ನೀಡುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಅಪಮಾನ ಮಾಡಿದ್ದರು. ಈಗ ಮಂಡ್ಯದಲ್ಲಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಹನಿ ನೀರನ್ನೂ ಕೊಡಬೇಡಿ ಎಂದಿದ್ದ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಮಂಡ್ಯದಲ್ಲೇ ಬಿಸ್ಲರಿ ವಾಟರನ್ನು ನೀಡುತ್ತೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳನ್ನೂ ಸರಿಯಾಗಿ ಕೊಂಡೊಯ್ಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರು ಉದಾರತೆಯನ್ನು ಮೆರೆಯಬೇಕು. ಅದನ್ನು ಬಿಟ್ಟು ಒಡೆದು ಆಳುವ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದ ಸೋನಿಯಾಗಾಂಧಿ ಅವರ ವಿರುದ್ಧ ನಾವು ಪೋಸ್ಟರ್ ಅಭಿಯಾನ ಮಾಡುತ್ತಿದ್ದೇವೆ. ಇಂತಹ ಜನವಿರೋಧಿ ಹೇಳಿಕೆ ನೀಡಿರುವ ನಿಮಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ರಾಜ್ಯದಲ್ಲಿ ಪಾದಯಾತ್ರೆ ನಡೆಸುವ ನೈತಿಕತೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.
ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಹನಿಯಂಬಾಡಿ ನಾಗರಾಜು, ಮಾದರಾಜ ಅರಸ್ ಇತರರು ಪೋಸ್ಟರ್ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…