ಜಿಲ್ಲೆಗಳು

ಸೋನಿಯಾ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ

ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಗೋವಾದಲ್ಲಿ ನಡೆದ ವಿಧಾನ ಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕರ್ನಾಟಕ ರಾಜ್ಯಕ್ಕೆ ಒಂದು ಹನಿ ನೀರನ್ನೂ ಮಹದಾಯಿ ನದಿಯಿಂದ ಕೊಡಬೇಡಿ ಎಂದು ಹೇಳಿಕೆ ನೀಡುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಅಪಮಾನ ಮಾಡಿದ್ದರು. ಈಗ ಮಂಡ್ಯದಲ್ಲಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಹನಿ ನೀರನ್ನೂ ಕೊಡಬೇಡಿ ಎಂದಿದ್ದ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಮಂಡ್ಯದಲ್ಲೇ ಬಿಸ್ಲರಿ ವಾಟರನ್ನು ನೀಡುತ್ತೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳನ್ನೂ ಸರಿಯಾಗಿ ಕೊಂಡೊಯ್ಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರು ಉದಾರತೆಯನ್ನು ಮೆರೆಯಬೇಕು. ಅದನ್ನು ಬಿಟ್ಟು ಒಡೆದು ಆಳುವ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದ ಸೋನಿಯಾಗಾಂಧಿ ಅವರ ವಿರುದ್ಧ ನಾವು ಪೋಸ್ಟರ್ ಅಭಿಯಾನ ಮಾಡುತ್ತಿದ್ದೇವೆ. ಇಂತಹ ಜನವಿರೋಧಿ ಹೇಳಿಕೆ ನೀಡಿರುವ ನಿಮಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ರಾಜ್ಯದಲ್ಲಿ ಪಾದಯಾತ್ರೆ ನಡೆಸುವ ನೈತಿಕತೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.

ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಹನಿಯಂಬಾಡಿ ನಾಗರಾಜು, ಮಾದರಾಜ ಅರಸ್ ಇತರರು ಪೋಸ್ಟರ್ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

 

 

 

andolana

Recent Posts

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

28 mins ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

2 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

2 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

3 hours ago

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

4 hours ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

4 hours ago