ಮಂಡ್ಯ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್ಗಾಂಧಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಗೋವಾದಲ್ಲಿ ನಡೆದ ವಿಧಾನ ಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕರ್ನಾಟಕ ರಾಜ್ಯಕ್ಕೆ ಒಂದು ಹನಿ ನೀರನ್ನೂ ಮಹದಾಯಿ ನದಿಯಿಂದ ಕೊಡಬೇಡಿ ಎಂದು ಹೇಳಿಕೆ ನೀಡುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಅಪಮಾನ ಮಾಡಿದ್ದರು. ಈಗ ಮಂಡ್ಯದಲ್ಲಿ ಭಾರತ್ ಜೋಡೊ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಹನಿ ನೀರನ್ನೂ ಕೊಡಬೇಡಿ ಎಂದಿದ್ದ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಮಂಡ್ಯದಲ್ಲೇ ಬಿಸ್ಲರಿ ವಾಟರನ್ನು ನೀಡುತ್ತೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳನ್ನೂ ಸರಿಯಾಗಿ ಕೊಂಡೊಯ್ಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರು ಉದಾರತೆಯನ್ನು ಮೆರೆಯಬೇಕು. ಅದನ್ನು ಬಿಟ್ಟು ಒಡೆದು ಆಳುವ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.
ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದ ಸೋನಿಯಾಗಾಂಧಿ ಅವರ ವಿರುದ್ಧ ನಾವು ಪೋಸ್ಟರ್ ಅಭಿಯಾನ ಮಾಡುತ್ತಿದ್ದೇವೆ. ಇಂತಹ ಜನವಿರೋಧಿ ಹೇಳಿಕೆ ನೀಡಿರುವ ನಿಮಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ರಾಜ್ಯದಲ್ಲಿ ಪಾದಯಾತ್ರೆ ನಡೆಸುವ ನೈತಿಕತೆಯಾದರೂ ಇದೆಯೇ ಎಂದು ಪ್ರಶ್ನಿಸಿದರು.
ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಹನಿಯಂಬಾಡಿ ನಾಗರಾಜು, ಮಾದರಾಜ ಅರಸ್ ಇತರರು ಪೋಸ್ಟರ್ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…