ಜಿಲ್ಲೆಗಳು

ಬಿಜೆಪಿಯಿಂದಾಗಿ ಧರ್ಮಗಳ ನಡುವೆ ಕದಡಿರುವ ಶಾಂತಿಯನ್ನು ಒಗ್ಗೂಡಿಸುವುದಕ್ಕಾಗಿಯೇ ಜೋಡೋ ಯಾತ್ರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ

ಹನೂರು: ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಬಿಜೆಪಿ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ಒಗ್ಗೂಡಿಸುವ ಸಲುವಾಗಿ ಭಾರತ್  ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮನವಿ‌ ಮಾಡಿದರು.
ಪಟ್ಟಣದ ಗೌರಿಶಂಕರ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ಭಾರತ್ ಜೋಡೋ ಪಾದಯಾತ್ರೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಬಿಜೆಪಿ ದೇಶದಲ್ಲಿ ಉಂಟು ಮಾಡಿರುವ ಸಮಸ್ಯೆಗಳ ಪೈಕಿ ಐದು ಮುಖ್ಯ ಅಂಶಗಳ ಬಗ್ಗೆ ದೇಶದ ಜನತೆಗೆ ತಿಳಿಸಿಕೊಡುವ ಉದ್ದೇಶದಿಂದ ಈ ಭಾರತ್ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಅಧಿಕಾರಕ್ಕೆ ಬಂದರೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಜನರನ್ನು ಭ್ರಮೆಯಲ್ಲಿಡುವ ಕೆಲಸ ಮಾಡಿದ್ದಾರೆ. ದಿನಬಳಕೆ ಆಹಾರ ಪದಾರ್ಥಗಳು, ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ. ಕೀಟನಾಶಕ ಹಾಗೂ ರಸಗೊಬ್ಬರಗಳ ಬೆಲೆಯನ್ನು ಏರಿಸುವ ಮೂಲಕ ಸಾಮಾನ್ಯ ಜನರು ಹಾಗೂ ರೈತರ ಬದುಕನ್ನು ದಮನ ಮಾಡುವ ಕೆಲಸ ಮಾಡುತ್ತಿದ್ದಾರೆ.
ರಾಜ್ಯದಲ್ಲಿ 40% ಸರ್ಕಾರ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯದ ಜನತೆಯ ಮೇಲೆ ಒಲವಿಲ್ಲ. ಪ್ರತಿ ಕೆಲಸದಲ್ಲೂ ಪರ್ಸೆಂಟೇಜ್ ತಗೆದುಕೊಳ್ಳುವ ಮೂಲಕ ದೇಶದ ಗಮನ ಸೆಳೆಯುವ ಮೂಲಕ ಕುಖ್ಯಾತಿ ಗಳಿಸಿದೆ. ಇದೆಲ್ಲವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ 3570 ಕಿ.ಮೀ ದೂರ ಇದೆ. ಇದು ಸತತ 150 ದಿನಗಳ ಕಾಲ ನಡೆಯಲಿದೆ. 10 ರಾಜ್ಯಗಳು ಹಾಗೂ 2‌ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರಗೆ ಜಿಲ್ಲೆಯಲ್ಲಿಯೆ ಕಾಂಗ್ರೆಸ್ ನ ಭದ್ರಕೋಟೆ ಎಂದು ಸತತ ಮೂರು ವಿಧಾನಸಭಾ ಚುನಾವಣೆಗಳಲ್ಲೂ ಸಾಬೀತುಪಡಿಸಿರುವ ಹನೂರು ಕ್ಷೇತ್ರದಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸುವ ಮೂಲಕ ರಾಹುಲ್ ಗಾಂಧಿಯವರ ಪಾದಯಾತ್ರಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.
ಶಾಸಕ ಆರ್. ನರೇಂದ್ರ ಮಾತನಾಡಿ, ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆ ಮುಂದೊಂದು ದಿನ ಇತಿಹಾಸ ಸೃಷ್ಟಿಸಲಿದ್ದು, ಇದರಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಕಾರ್ಯಕರ್ತರು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದ್ದಾರೆ ಎಂದರು.
ಬಿಜೆಪಿ ಇಂದು ಹೆಣ ಹಾಗೂ ಹಣದ ಮೇಲೆ ರಾಜಕಾರಣ ಮಾಡುತ್ತಿದೆ. ಸಾಕಷ್ಟು ಸಾಮಾಜಿಕ ಕೃತ್ಯಗಳನ್ನು ನಡೆಸಿ ಅದನ್ನು ಅಮಾಯಕರು ಅಥವಾ ಬೇರೆ ಪಕ್ಷದ ನಾಯಕರ ತಲೆಗೆ ಕಟ್ಟುವ ಪ್ರಯತ್ನ ಮಾಡುತ್ತಿದೆ. ಘಟನೆಗಳ ನಡೆದ ಬಳಿಕ ಮಾಡಿದ ತನಿಖೆಗಳಲ್ಲಿ ಇದು ಬಯಲಾಗಿದೆ. ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಹುಟ್ಟು ಹಾಕುವ ಮೂಲಕ ಬಿಜೆಪಿ ಸಾಮಾನ್ಯರನ್ನು ಸಾವಿನ ದವಡೆಗೆ ಸಿಲುಕಿಸುವ ಪಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಈಶ್ವರ್, ದೇವರಾಜು,ಕೆಪಿಸಿಸಿ ಸದಸ್ಯ ರಾಮಪುರ ಬಸವರಾಜು ಪಪಂ ಉಪಾಧ್ಯಕ್ಷ ಗಿರೀಶ್,ಸದಸ್ಯರುಗಳಾದ ಸುದೇಶ್, ಸಂಪತ್, ಹರೀಶ್ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಮಾದನಾಯಕ,ನಿರ್ದೇಶಕ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಮುರುಗೇಶ್, ಸುಧಾ,ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್,ಸುರೇಶ್ ಹಿರಿಯ ಮುಖಂಡರುಗಳ ಪೆದ್ದನಪಾಳ್ಯ ಮಣಿ, ಚಿಕ್ಕತಮ್ಮಯ್ಯ,ಅಜ್ಜಿಪುರ ನಾಗರಾಜು,ಮತೀನ್ ವೆಂಕಟರಮಣನಾಯ್ಡು, ಪಾಳ್ಯ ಕೃಷ್ಣ ಹಾಗೂ ಕಾರ್ಯಕರ್ತರು ಹಾಜರಿದ್ದರು

andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

2 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

2 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

2 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

2 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

2 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

2 hours ago