ಹನೂರು: ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಬಿಜೆಪಿ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ಒಗ್ಗೂಡಿಸುವ ಸಲುವಾಗಿ ಭಾರತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮನವಿ ಮಾಡಿದರು.
ರಾಜ್ಯದಲ್ಲಿ 40% ಸರ್ಕಾರ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯದ ಜನತೆಯ ಮೇಲೆ ಒಲವಿಲ್ಲ. ಪ್ರತಿ ಕೆಲಸದಲ್ಲೂ ಪರ್ಸೆಂಟೇಜ್ ತಗೆದುಕೊಳ್ಳುವ ಮೂಲಕ ದೇಶದ ಗಮನ ಸೆಳೆಯುವ ಮೂಲಕ ಕುಖ್ಯಾತಿ ಗಳಿಸಿದೆ. ಇದೆಲ್ಲವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಇಂದು ಹೆಣ ಹಾಗೂ ಹಣದ ಮೇಲೆ ರಾಜಕಾರಣ ಮಾಡುತ್ತಿದೆ. ಸಾಕಷ್ಟು ಸಾಮಾಜಿಕ ಕೃತ್ಯಗಳನ್ನು ನಡೆಸಿ ಅದನ್ನು ಅಮಾಯಕರು ಅಥವಾ ಬೇರೆ ಪಕ್ಷದ ನಾಯಕರ ತಲೆಗೆ ಕಟ್ಟುವ ಪ್ರಯತ್ನ ಮಾಡುತ್ತಿದೆ. ಘಟನೆಗಳ ನಡೆದ ಬಳಿಕ ಮಾಡಿದ ತನಿಖೆಗಳಲ್ಲಿ ಇದು ಬಯಲಾಗಿದೆ. ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಹುಟ್ಟು ಹಾಕುವ ಮೂಲಕ ಬಿಜೆಪಿ ಸಾಮಾನ್ಯರನ್ನು ಸಾವಿನ ದವಡೆಗೆ ಸಿಲುಕಿಸುವ ಪಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಈಶ್ವರ್, ದೇವರಾಜು,ಕೆಪಿಸಿಸಿ ಸದಸ್ಯ ರಾಮಪುರ ಬಸವರಾಜು ಪಪಂ ಉಪಾಧ್ಯಕ್ಷ ಗಿರೀಶ್,ಸದಸ್ಯರುಗಳಾದ ಸುದೇಶ್, ಸಂಪತ್, ಹರೀಶ್ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಮಾದನಾಯಕ,ನಿರ್ದೇಶಕ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಮುರುಗೇಶ್, ಸುಧಾ,ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್,ಸುರೇಶ್ ಹಿರಿಯ ಮುಖಂಡರುಗಳ ಪೆದ್ದನಪಾಳ್ಯ ಮಣಿ, ಚಿಕ್ಕತಮ್ಮಯ್ಯ,ಅಜ್ಜಿಪುರ ನಾಗರಾಜು,ಮತೀನ್ ವೆಂಕಟರಮಣನಾಯ್ಡು, ಪಾಳ್ಯ ಕೃಷ್ಣ ಹಾಗೂ ಕಾರ್ಯಕರ್ತರು ಹಾಜರಿದ್ದರು
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…