ಹನೂರು: ದೇಶದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸಿ ಶಾಂತಿ ಕದಡುವ ಮೂಲಕ ಬಿಜೆಪಿ ಸಮುದಾಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಇದನ್ನು ಒಗ್ಗೂಡಿಸುವ ಸಲುವಾಗಿ ಭಾರತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಮನವಿ ಮಾಡಿದರು.
ರಾಜ್ಯದಲ್ಲಿ 40% ಸರ್ಕಾರ ನಡೆಸುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯದ ಜನತೆಯ ಮೇಲೆ ಒಲವಿಲ್ಲ. ಪ್ರತಿ ಕೆಲಸದಲ್ಲೂ ಪರ್ಸೆಂಟೇಜ್ ತಗೆದುಕೊಳ್ಳುವ ಮೂಲಕ ದೇಶದ ಗಮನ ಸೆಳೆಯುವ ಮೂಲಕ ಕುಖ್ಯಾತಿ ಗಳಿಸಿದೆ. ಇದೆಲ್ಲವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಇಂದು ಹೆಣ ಹಾಗೂ ಹಣದ ಮೇಲೆ ರಾಜಕಾರಣ ಮಾಡುತ್ತಿದೆ. ಸಾಕಷ್ಟು ಸಾಮಾಜಿಕ ಕೃತ್ಯಗಳನ್ನು ನಡೆಸಿ ಅದನ್ನು ಅಮಾಯಕರು ಅಥವಾ ಬೇರೆ ಪಕ್ಷದ ನಾಯಕರ ತಲೆಗೆ ಕಟ್ಟುವ ಪ್ರಯತ್ನ ಮಾಡುತ್ತಿದೆ. ಘಟನೆಗಳ ನಡೆದ ಬಳಿಕ ಮಾಡಿದ ತನಿಖೆಗಳಲ್ಲಿ ಇದು ಬಯಲಾಗಿದೆ. ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯನ್ನು ಹುಟ್ಟು ಹಾಕುವ ಮೂಲಕ ಬಿಜೆಪಿ ಸಾಮಾನ್ಯರನ್ನು ಸಾವಿನ ದವಡೆಗೆ ಸಿಲುಕಿಸುವ ಪಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಈಶ್ವರ್, ದೇವರಾಜು,ಕೆಪಿಸಿಸಿ ಸದಸ್ಯ ರಾಮಪುರ ಬಸವರಾಜು ಪಪಂ ಉಪಾಧ್ಯಕ್ಷ ಗಿರೀಶ್,ಸದಸ್ಯರುಗಳಾದ ಸುದೇಶ್, ಸಂಪತ್, ಹರೀಶ್ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಮಾದನಾಯಕ,ನಿರ್ದೇಶಕ ಮುರುಡೇಶ್ವರ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಮುರುಗೇಶ್, ಸುಧಾ,ಯೂತ್ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್,ಸುರೇಶ್ ಹಿರಿಯ ಮುಖಂಡರುಗಳ ಪೆದ್ದನಪಾಳ್ಯ ಮಣಿ, ಚಿಕ್ಕತಮ್ಮಯ್ಯ,ಅಜ್ಜಿಪುರ ನಾಗರಾಜು,ಮತೀನ್ ವೆಂಕಟರಮಣನಾಯ್ಡು, ಪಾಳ್ಯ ಕೃಷ್ಣ ಹಾಗೂ ಕಾರ್ಯಕರ್ತರು ಹಾಜರಿದ್ದರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…