ಬೆಂಗಳೂರು-ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿ ಮುಂದೆ ಭಯೋತ್ಪಾದಕರನ್ನು ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ರಾಷ್ಟ್ರಪ್ರೇಮಿಗಳೆಂದು ಹೇಳಬಹುದು ಎಂಬ ಆತಂಕವನ್ನು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಅವರು, 30-40 ಕೊಲೆ ಮಾಡಿರುವಂತಹ ರೌಡಿಗಳನ್ನು ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಸೇರಿಸಿಕೊಂಡು ಏನೇನೋ ಸಮರ್ಥನೆ ನೀಡುತ್ತಾರೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಸ್ಲಾಮಾಬಾದ್ನಲ್ಲಿ ನಮ್ಮ ಧ್ವಜ ಹಾರಿಸುತ್ತೇವೆ ಎಂದು ಪದೇ ಪದೇ ಹೇಳುವುದನ್ನು ನೋಡಿದರೆ ಮುಂದೊಂದು ದಿನ ಭಯೋತ್ಪಾದಕರನ್ನು ಸೇರಿಸಿಕೊಂಡು ದೇಶಪ್ರೇಮಿಗಳೆಂದು ಬಿಂಬಿಸಬಹುದೇನೋ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ.
ದೇಶಕ್ಕೆ ಮೊದಲ ಭಯೋತ್ಪಾದಕನನ್ನು ನೀಡಿದ ಗೋಡ್ಸೆ ಸಂತತಿಯವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಮುಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು ಎಂಬುದು ವಾಸ್ತವ ಎಂದು ಲೇವಡಿ ಮಾಡಿದ್ದಾರೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…