ಬೆಂಗಳೂರು-ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವ ಬಿಜೆಪಿ ಮುಂದೆ ಭಯೋತ್ಪಾದಕರನ್ನು ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ರಾಷ್ಟ್ರಪ್ರೇಮಿಗಳೆಂದು ಹೇಳಬಹುದು ಎಂಬ ಆತಂಕವನ್ನು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಅವರು, 30-40 ಕೊಲೆ ಮಾಡಿರುವಂತಹ ರೌಡಿಗಳನ್ನು ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಸೇರಿಸಿಕೊಂಡು ಏನೇನೋ ಸಮರ್ಥನೆ ನೀಡುತ್ತಾರೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಸ್ಲಾಮಾಬಾದ್ನಲ್ಲಿ ನಮ್ಮ ಧ್ವಜ ಹಾರಿಸುತ್ತೇವೆ ಎಂದು ಪದೇ ಪದೇ ಹೇಳುವುದನ್ನು ನೋಡಿದರೆ ಮುಂದೊಂದು ದಿನ ಭಯೋತ್ಪಾದಕರನ್ನು ಸೇರಿಸಿಕೊಂಡು ದೇಶಪ್ರೇಮಿಗಳೆಂದು ಬಿಂಬಿಸಬಹುದೇನೋ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ.
ದೇಶಕ್ಕೆ ಮೊದಲ ಭಯೋತ್ಪಾದಕನನ್ನು ನೀಡಿದ ಗೋಡ್ಸೆ ಸಂತತಿಯವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಮುಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು ಎಂಬುದು ವಾಸ್ತವ ಎಂದು ಲೇವಡಿ ಮಾಡಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…