ಜಿಲ್ಲೆಗಳು

ಬಿಜೆಪಿ ಟಿಕೆಟ್ ಆಕಾಂಕ್ಷಿ ಜನಧ್ವನಿ ಬಿ ವೆಂಕಟೇಶ್ ರಿಂದ ಬೃಹತ್ ಆರೋಗ್ಯ ತಪಸಣಾ ಶಿಬಿರ

ಹನೂರು :ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಜನಧ್ವನಿ ವೆಂಕಟೇಶ್ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ನಾಯಕರು, ಜನರ ಮನ ಗೆಲ್ಲಲು ಹಗಲಿರುಳು ಶ್ರಮಿಸುತ್ತಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪ ಸಮೀಪ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿದ್ದು ಹಳ್ಳಿ-ಹಳ್ಳಿಗಳಿಂದ ಸಾವಿರಾರು ಜನರನ್ನು ಬಸ್ ಗಳಲ್ಲಿ ಕರೆತಂದು ತಪಾಸಣೆ ನಡೆಸಲಾಗುತ್ತಿದೆ‌.

ಕಣ್ಣಿನ ತಪಾಸಣೆ, ಕ್ಯಾನ್ಸರ್, ಬಿಪಿ, ಶುಗರ್, ಕಿಡ್ನಿ , ಹೋಮಿಯೋಪತಿ, ಆಯುರ್ವೇದ, ಮಕ್ಕಳ ವಿಭಾಗ ಸೇರಿದಂತೆ ಸಂಪೂರ್ಣ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದ್ದು 6-7 ಸಾವಿರಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
ಹನೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸರತಿ ಸಾಲೇ ಇದ್ದು ಪ್ರೀತಂ ನಾಗಪ್ಪ, ದತ್ತೇಶ್ ಕುಮಾರ್ ಹೀಗೆ ಪಟ್ಟಿ ಬೆಳೆಯುತ್ತಿದ್ದು ಎಲ್ಲರಿಗೂ ಠಕ್ಕರ್ ಕೊಡಲು ವೆಂಕಟೇಶ್ ಈ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ಗಮನ ಸೆಳೆದಿದ್ದಾರೆ.

ಇನ್ನು, ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ವೇದಿಕೆ ಕಾರ್ಯಕ್ರಮಕ್ಕೆ ಒಬಿಸಿ ಮೋರ್ಚಾ ರಾಷ್ಟೀಯ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಅರುಣಾ,ರಾಜ್ಯಾಧ್ಯಕ್ಷ ನೆ ಲ ನರೇಂದ್ರಬಾಬು ಭಾಗಿಯಾಗಲಿದ್ದಾರೆ.

andolanait

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

2 hours ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

2 hours ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

2 hours ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

2 hours ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

12 hours ago