ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜಯಪ್ರಕಾಶ್ ಚಿಕ್ಕಣ್ಣ ಹೆಸರು ಶಿಫಾರಸು
ಮೈಸೂರು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನ ಮಾಡುತ್ತಲೇ ಬಂದಿದ್ದರೂ ಸಾಧ್ಯವಾಗಿಲ್ಲ. ಮುಂಬರುವ ಚುನಾವಣೆಯಲ್ಲೂ ಜಾ.ದಳ ಸೋಲಿಸಲಾಗದು. ಪ್ರಾದೇಶಿಕ ಪಕ್ಷ ಉಳಿಸುವ ಜತೆಗೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಕೈ ಬಲಪಡಿಸಲು ಜಾ.ದಳದ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದಿಂದ ಆರಂಭವಾದ ಪಂಚರತ್ನ ರಥಯಾತ್ರೆಯು ಬೀದರ್ ಜಿಲ್ಲೆಯಲ್ಲಿ ಮುಂದುವರಿದಿದೆ. ಮಂಡ್ಯ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಮಾರ್ಚ್ ತಿಂಗಳಲ್ಲಿ ಮೈಸೂರಿನಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ ಎಂದರು.
ಕೆ.ಆರ್.ನಗರ, ಪಿರಿಯಾಪಟ್ಟಣ, ಚಾಮುಂಡೇಶ್ವರಿ, ತಿ.ನರಸೀಪುರದಲ್ಲಿ ಹಾಲಿ ಶಾಸಕರು ಇದ್ದಾರೆ. ಉಳಿದ ಕ್ಷೇತ್ರಗಳಲ್ಲಿ ಗೆಲ್ಲಲು ಶಕ್ತಿಮೀರಿ ಶ್ರಮಿಸಲಾಗುವುದು. ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜಯಪ್ರಕಾಶ್ ಚಿಕ್ಕಣ್ಣ ಅವರಿಗೆ ಟಿಕೆಟ್ ಕೊಡುವಂತೆ ಸರ್ವಾನುಮತದಿಂದ ಶಿಫಾರಸು ಮಾಡಲಾಗಿದೆ. ಜ.೧೫ರ ನಂತರ ಜಯಪ್ರಕಾಶ್ ಅವರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಯಪ್ರಕಾಶ್ ಚಿಕ್ಕಣ್ಣ ಗೆಲ್ಲುವ ಕಾರಣ ಜಿಲ್ಲೆಯ ಎಲ್ಲ ನಾಯಕರೂ ಒಬ್ಬರನ್ನೇ ಶಿಫಾರಸು ಮಾಡಿದ್ದೇವೆ ಎಂದರು.
ಮುತ್ಸದ್ಧಿಗಳ ಬಾಯಲ್ಲಿ ಬರಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ಅವರವರ ಕ್ಷೇತ್ರಗಳಲ್ಲಿ ಗೆಲ್ಲಲಾಗದವರು ರಾಜ್ಯ, ರಾಷ್ಟ್ರೀಯ ವಿಚಾರಗಳನ್ನು ಮಾತನಾಡುತ್ತಾರೆ. ನಾಯಿಗೆ ಇರುವ ನಿಯತ್ತು ಮನುಷ್ಯರಿಗಿಲ್ಲ. ಯಾರೇ ಆಗಿದ್ದರೂ ಇತಿಮಿತಿಯಲ್ಲಿ ಅರ್ಥ ಮಾಡಿಕೊಂಡು ಮಾತನಾಡಬೇಕು. ಸಿದ್ದರಾಮಯ್ಯ ಅವರು ಮುತ್ಸದ್ಧಿ ರಾಜಕಾರಣಿ. ಅವರ ಬಾಯಲ್ಲಿ ಇಂತಹ ಮಾತುಗಳು ಬರಬಾರದಾಗಿತ್ತು ಎಂದು ಹೇಳಿದರು. ಸ್ಯಾಂಟ್ರೋ ರವಿ ಬಗ್ಗೆ ಪ್ರಶ್ನಿಸಿದ್ದಕ್ಕೆ, ನನಗೆ ಆ ಲೈನ್ ಯಾವುದೂ ಗೊತ್ತಿಲ್ಲ. ಏನು ಗೊತ್ತಿಲ್ಲ ಎಂದರು.
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…