ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜಯಪ್ರಕಾಶ್ ಚಿಕ್ಕಣ್ಣ ಹೆಸರು ಶಿಫಾರಸು
ಮೈಸೂರು: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನ ಮಾಡುತ್ತಲೇ ಬಂದಿದ್ದರೂ ಸಾಧ್ಯವಾಗಿಲ್ಲ. ಮುಂಬರುವ ಚುನಾವಣೆಯಲ್ಲೂ ಜಾ.ದಳ ಸೋಲಿಸಲಾಗದು. ಪ್ರಾದೇಶಿಕ ಪಕ್ಷ ಉಳಿಸುವ ಜತೆಗೆ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಕೈ ಬಲಪಡಿಸಲು ಜಾ.ದಳದ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದಿಂದ ಆರಂಭವಾದ ಪಂಚರತ್ನ ರಥಯಾತ್ರೆಯು ಬೀದರ್ ಜಿಲ್ಲೆಯಲ್ಲಿ ಮುಂದುವರಿದಿದೆ. ಮಂಡ್ಯ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಅಭೂತಪೂರ್ವ ಯಶಸ್ಸು ಕಂಡಿದೆ. ಮಾರ್ಚ್ ತಿಂಗಳಲ್ಲಿ ಮೈಸೂರಿನಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ ಎಂದರು.
ಕೆ.ಆರ್.ನಗರ, ಪಿರಿಯಾಪಟ್ಟಣ, ಚಾಮುಂಡೇಶ್ವರಿ, ತಿ.ನರಸೀಪುರದಲ್ಲಿ ಹಾಲಿ ಶಾಸಕರು ಇದ್ದಾರೆ. ಉಳಿದ ಕ್ಷೇತ್ರಗಳಲ್ಲಿ ಗೆಲ್ಲಲು ಶಕ್ತಿಮೀರಿ ಶ್ರಮಿಸಲಾಗುವುದು. ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ಜಯಪ್ರಕಾಶ್ ಚಿಕ್ಕಣ್ಣ ಅವರಿಗೆ ಟಿಕೆಟ್ ಕೊಡುವಂತೆ ಸರ್ವಾನುಮತದಿಂದ ಶಿಫಾರಸು ಮಾಡಲಾಗಿದೆ. ಜ.೧೫ರ ನಂತರ ಜಯಪ್ರಕಾಶ್ ಅವರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಯಪ್ರಕಾಶ್ ಚಿಕ್ಕಣ್ಣ ಗೆಲ್ಲುವ ಕಾರಣ ಜಿಲ್ಲೆಯ ಎಲ್ಲ ನಾಯಕರೂ ಒಬ್ಬರನ್ನೇ ಶಿಫಾರಸು ಮಾಡಿದ್ದೇವೆ ಎಂದರು.
ಮುತ್ಸದ್ಧಿಗಳ ಬಾಯಲ್ಲಿ ಬರಬಾರದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ಅವರವರ ಕ್ಷೇತ್ರಗಳಲ್ಲಿ ಗೆಲ್ಲಲಾಗದವರು ರಾಜ್ಯ, ರಾಷ್ಟ್ರೀಯ ವಿಚಾರಗಳನ್ನು ಮಾತನಾಡುತ್ತಾರೆ. ನಾಯಿಗೆ ಇರುವ ನಿಯತ್ತು ಮನುಷ್ಯರಿಗಿಲ್ಲ. ಯಾರೇ ಆಗಿದ್ದರೂ ಇತಿಮಿತಿಯಲ್ಲಿ ಅರ್ಥ ಮಾಡಿಕೊಂಡು ಮಾತನಾಡಬೇಕು. ಸಿದ್ದರಾಮಯ್ಯ ಅವರು ಮುತ್ಸದ್ಧಿ ರಾಜಕಾರಣಿ. ಅವರ ಬಾಯಲ್ಲಿ ಇಂತಹ ಮಾತುಗಳು ಬರಬಾರದಾಗಿತ್ತು ಎಂದು ಹೇಳಿದರು. ಸ್ಯಾಂಟ್ರೋ ರವಿ ಬಗ್ಗೆ ಪ್ರಶ್ನಿಸಿದ್ದಕ್ಕೆ, ನನಗೆ ಆ ಲೈನ್ ಯಾವುದೂ ಗೊತ್ತಿಲ್ಲ. ಏನು ಗೊತ್ತಿಲ್ಲ ಎಂದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…