ಮೈಸೂರು ಜಿಲ್ಲೆಯ ನಂಜನಗೂಡು ನಗರಸಭೆಯ 20ನೇ ವಾರ್ಡ್ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಕೀಲ ಮಹೇಶ್ ಅತ್ತಿಖಾನೆ ಅವರು ಜಯಭೇರಿ ಬಾರಿಸಿದ್ದಾರೆ.
ಈ ಹಿಂದೆ ಇದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ದೊರೆಸ್ವಾಮಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು ಹಾಗೂ ನಗರಸಭೆ ಸದಸ್ಯ ಸ್ಥಾನಕ್ಕೂ ಸಹ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ವಾರ್ಡಗೆ ಡಿಸೆಂಬರ್ 27ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದಿಂದ ದೊರೆಸ್ವಾಮಿ, ಜೆಡಿಎಸ್ನಿಂದ ಸುಬ್ರಹ್ಮಣ್ಯ, ಪಕ್ಷೇತರ ಅಭ್ಯರ್ಥಿಯಾಗಿ ಜಯಲಕ್ಷ್ಮಿ ಹಾಗೂ ಬಿಜೆಪಿಯಿಂದ ಮಹೇಶ್ ಅತ್ತಿಖಾನೆ ಕಣಕ್ಕಿಳಿದಿದ್ದರು.
ಈ ಉಪಚುನಾವಣೆಯಲ್ಲಿ ಒಟ್ಟು 568 ಮತಗಳು ಚಲಾವಣೆಗೊಂಡಿದ್ದು, ಪಕ್ಷೇತರ ಅಭ್ಯರ್ಥಿ: 5, ಕಾಂಗ್ರೆಸ್: 186, ಬಿಜೆಪಿ: 231, ಜೆಡಿಎಸ್: 144, ನೋಟಾ: 2 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…