ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಾಲ್ಯ ಸ್ನೇಹಿತ ನಿವೃತ್ತ ಪ್ರಾಂಶುಪಾಲರಾದ ಸಿಂಗಾನಲ್ಲೂರು ಸಿದ್ದರಾಜು ಮಾತನಾಡಿ ದಿ.ದೇವರಾಜು ಅವರು ಬಾಲ್ಯದಿಂದಲ್ಲೇ ಹೋರಾಟ ಮನೋಭಾವನೆ ಬೆಳಿಸಿಕೊಳ್ಳುವುದರ ಮೂಲಕ ಪಿಯುಸಿ ಮುಗಿಸಿ ನಂತರ ರಾಜಕೀಯಕ್ಕೆ ಪಾದರ್ಪಣೆ ಮಾಡಿ ಜನ ಮನ್ನಣೆ ಗಳಿಸಿದಂತಹ ವ್ಯಕ್ತಿ, ಹಾಗೂ ಅವರು ರಾಜಕೀಯಕ್ಕೆ ಬಂದಗಿನಿಂದಲೂ ಕಾಂಗ್ರೇಸ್ ಪಕ್ಷದಲ್ಲೇ ನಿಷ್ಠವಂತ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತವರು, ಅವರ ಮೃತಪಟ್ಟಿದ್ದ ವೇಳೆ ಅಂತ್ಯಕ್ರಿಯೆ ಮುಗಿಯುವ ತನಕ ಇದ್ದಂತಹ ಏಕೈಕ ಶಾಸಕ ಅಂದರೆ ಅದು ನರೇಂದ್ರ ರಾಜೂಗೌಡ ಅವರು ಜೊತೆಗೆ ಅವರ ಕೊನೆ ಆಸೆ ಮುಂದಿನ ಚುನಾವಣೆಯಲ್ಲಿ ಶಾಸಕ ಆರ್.ನರೇಂದ್ರವನ್ನು ಗೆಲ್ಲಿಸುವ ಮೂಲಕ ಸಚಿವರನ್ನಾಗಿ ಮಾಡಬೇಕು ಎಂದು ಊರಿನ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚೆರ್ಚಿಸುತ್ತಿದ್ದರೂ ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಉತ್ತಮ ಜನ ಸಂಪರ್ಕ ಹೊದಂತಹ ವ್ಯಕ್ತಿ ಎಂದು ತಿಳಿಸಿದರು.
ಇದೇ ವೇಳೆ ಯುವ ಕಾಂಗ್ರೇಸ್ನ ಜಿಲ್ಲಾಧ್ಯಕ್ಷ ಚೇತನ್ ದೂರೆರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವಸ್ವಾಮಿ, ಮುಖಂಡರಾದ ಪಾಳ್ಯ ಕೃಷ್ಣ, ಉದ್ದನೂರು ಸಿದ್ದರಾಜು, ಮಹಾದೇವ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…