ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಾಲ್ಯ ಸ್ನೇಹಿತ ನಿವೃತ್ತ ಪ್ರಾಂಶುಪಾಲರಾದ ಸಿಂಗಾನಲ್ಲೂರು ಸಿದ್ದರಾಜು ಮಾತನಾಡಿ ದಿ.ದೇವರಾಜು ಅವರು ಬಾಲ್ಯದಿಂದಲ್ಲೇ ಹೋರಾಟ ಮನೋಭಾವನೆ ಬೆಳಿಸಿಕೊಳ್ಳುವುದರ ಮೂಲಕ ಪಿಯುಸಿ ಮುಗಿಸಿ ನಂತರ ರಾಜಕೀಯಕ್ಕೆ ಪಾದರ್ಪಣೆ ಮಾಡಿ ಜನ ಮನ್ನಣೆ ಗಳಿಸಿದಂತಹ ವ್ಯಕ್ತಿ, ಹಾಗೂ ಅವರು ರಾಜಕೀಯಕ್ಕೆ ಬಂದಗಿನಿಂದಲೂ ಕಾಂಗ್ರೇಸ್ ಪಕ್ಷದಲ್ಲೇ ನಿಷ್ಠವಂತ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತವರು, ಅವರ ಮೃತಪಟ್ಟಿದ್ದ ವೇಳೆ ಅಂತ್ಯಕ್ರಿಯೆ ಮುಗಿಯುವ ತನಕ ಇದ್ದಂತಹ ಏಕೈಕ ಶಾಸಕ ಅಂದರೆ ಅದು ನರೇಂದ್ರ ರಾಜೂಗೌಡ ಅವರು ಜೊತೆಗೆ ಅವರ ಕೊನೆ ಆಸೆ ಮುಂದಿನ ಚುನಾವಣೆಯಲ್ಲಿ ಶಾಸಕ ಆರ್.ನರೇಂದ್ರವನ್ನು ಗೆಲ್ಲಿಸುವ ಮೂಲಕ ಸಚಿವರನ್ನಾಗಿ ಮಾಡಬೇಕು ಎಂದು ಊರಿನ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚೆರ್ಚಿಸುತ್ತಿದ್ದರೂ ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಉತ್ತಮ ಜನ ಸಂಪರ್ಕ ಹೊದಂತಹ ವ್ಯಕ್ತಿ ಎಂದು ತಿಳಿಸಿದರು.
ಇದೇ ವೇಳೆ ಯುವ ಕಾಂಗ್ರೇಸ್ನ ಜಿಲ್ಲಾಧ್ಯಕ್ಷ ಚೇತನ್ ದೂರೆರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವಸ್ವಾಮಿ, ಮುಖಂಡರಾದ ಪಾಳ್ಯ ಕೃಷ್ಣ, ಉದ್ದನೂರು ಸಿದ್ದರಾಜು, ಮಹಾದೇವ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…