ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಾಲ್ಯ ಸ್ನೇಹಿತ ನಿವೃತ್ತ ಪ್ರಾಂಶುಪಾಲರಾದ ಸಿಂಗಾನಲ್ಲೂರು ಸಿದ್ದರಾಜು ಮಾತನಾಡಿ ದಿ.ದೇವರಾಜು ಅವರು ಬಾಲ್ಯದಿಂದಲ್ಲೇ ಹೋರಾಟ ಮನೋಭಾವನೆ ಬೆಳಿಸಿಕೊಳ್ಳುವುದರ ಮೂಲಕ ಪಿಯುಸಿ ಮುಗಿಸಿ ನಂತರ ರಾಜಕೀಯಕ್ಕೆ ಪಾದರ್ಪಣೆ ಮಾಡಿ ಜನ ಮನ್ನಣೆ ಗಳಿಸಿದಂತಹ ವ್ಯಕ್ತಿ, ಹಾಗೂ ಅವರು ರಾಜಕೀಯಕ್ಕೆ ಬಂದಗಿನಿಂದಲೂ ಕಾಂಗ್ರೇಸ್ ಪಕ್ಷದಲ್ಲೇ ನಿಷ್ಠವಂತ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತವರು, ಅವರ ಮೃತಪಟ್ಟಿದ್ದ ವೇಳೆ ಅಂತ್ಯಕ್ರಿಯೆ ಮುಗಿಯುವ ತನಕ ಇದ್ದಂತಹ ಏಕೈಕ ಶಾಸಕ ಅಂದರೆ ಅದು ನರೇಂದ್ರ ರಾಜೂಗೌಡ ಅವರು ಜೊತೆಗೆ ಅವರ ಕೊನೆ ಆಸೆ ಮುಂದಿನ ಚುನಾವಣೆಯಲ್ಲಿ ಶಾಸಕ ಆರ್.ನರೇಂದ್ರವನ್ನು ಗೆಲ್ಲಿಸುವ ಮೂಲಕ ಸಚಿವರನ್ನಾಗಿ ಮಾಡಬೇಕು ಎಂದು ಊರಿನ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚೆರ್ಚಿಸುತ್ತಿದ್ದರೂ ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಉತ್ತಮ ಜನ ಸಂಪರ್ಕ ಹೊದಂತಹ ವ್ಯಕ್ತಿ ಎಂದು ತಿಳಿಸಿದರು.
ಇದೇ ವೇಳೆ ಯುವ ಕಾಂಗ್ರೇಸ್ನ ಜಿಲ್ಲಾಧ್ಯಕ್ಷ ಚೇತನ್ ದೂರೆರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವಸ್ವಾಮಿ, ಮುಖಂಡರಾದ ಪಾಳ್ಯ ಕೃಷ್ಣ, ಉದ್ದನೂರು ಸಿದ್ದರಾಜು, ಮಹಾದೇವ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…
ಮೈಸೂರು: ಮಿರರ್ ರಿಫ್ಲೆಕ್ಷನ್ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್…