ಜಿಲ್ಲೆಗಳು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಂಗತ ದೇವರಾಜು ರವರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದವರು, ದಿವಂಗತ ರಾಜೂಗೌಡರ ಅವರ ಜೊತೆ ಹತ್ತಿರದಿಂದ ಒಡನಾಡ ಇಟ್ಟುಕೊಂಡಿದ್ದವರು, ದಿ.ದೇವರಾಜು ರವರು ಕಳೆದ ೪೨ ವರ್ಷಗಳ ಹಿಂದೆ ದ್ವಿತೀಯ ಪಿಯುಸಿಯನ್ನು ಮುಗಿಸಿ ರಾಜಕೀಯಕ್ಕೆ ಕಾಲಿಟ್ಟಗಿಲಿಂದಲೂ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಮಲೆಮಹದೇಶ್ವರ ಬೆಟ್ಟದ ಧರ್ಮದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಅವರು ಹಿಂದುಳಿದ ವರ್ಗ, ಬಡವರ ಕಷ್ಟಗಳಿಗೆ ಸ್ಪಂದಿಸುತ್ತಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಮಾಡುವ ಮೂಲಕ ಮೂಂಚೂಣಿಯಲ್ಲಿದ್ದವರು ಅವರು ನಮಗೆ ನೀಡುತ್ತಿದ್ದ ಮಾರ್ಗದರ್ಶನದಲ್ಲಿ ಶೇಕಡ ೯೯.೯ನ ರಷ್ಟು ಸರಿಯಾಗಿರುತ್ತಿತ್ತು ಅಂತಹ ನಿಷ್ಟಾವಂತ ಹಾಗೂ ನಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡಿರುವುದು ದುಃಖಕರ ಸಂಗಾತಿ ಎಂದು ಭಾವುಕರಾಗಿ ಹೇಳಿದರು.

ಬಾಲ್ಯ ಸ್ನೇಹಿತ ನಿವೃತ್ತ ಪ್ರಾಂಶುಪಾಲರಾದ ಸಿಂಗಾನಲ್ಲೂರು ಸಿದ್ದರಾಜು ಮಾತನಾಡಿ ದಿ.ದೇವರಾಜು ಅವರು ಬಾಲ್ಯದಿಂದಲ್ಲೇ ಹೋರಾಟ ಮನೋಭಾವನೆ ಬೆಳಿಸಿಕೊಳ್ಳುವುದರ ಮೂಲಕ ಪಿಯುಸಿ ಮುಗಿಸಿ ನಂತರ ರಾಜಕೀಯಕ್ಕೆ ಪಾದರ್ಪಣೆ ಮಾಡಿ ಜನ ಮನ್ನಣೆ ಗಳಿಸಿದಂತಹ ವ್ಯಕ್ತಿ, ಹಾಗೂ ಅವರು ರಾಜಕೀಯಕ್ಕೆ ಬಂದಗಿನಿಂದಲೂ ಕಾಂಗ್ರೇಸ್ ಪಕ್ಷದಲ್ಲೇ ನಿಷ್ಠವಂತ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತವರು, ಅವರ ಮೃತಪಟ್ಟಿದ್ದ ವೇಳೆ ಅಂತ್ಯಕ್ರಿಯೆ ಮುಗಿಯುವ ತನಕ ಇದ್ದಂತಹ ಏಕೈಕ ಶಾಸಕ ಅಂದರೆ ಅದು ನರೇಂದ್ರ ರಾಜೂಗೌಡ ಅವರು ಜೊತೆಗೆ ಅವರ ಕೊನೆ ಆಸೆ ಮುಂದಿನ ಚುನಾವಣೆಯಲ್ಲಿ ಶಾಸಕ ಆರ್.ನರೇಂದ್ರವನ್ನು ಗೆಲ್ಲಿಸುವ ಮೂಲಕ ಸಚಿವರನ್ನಾಗಿ ಮಾಡಬೇಕು ಎಂದು ಊರಿನ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚೆರ್ಚಿಸುತ್ತಿದ್ದರೂ ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಉತ್ತಮ ಜನ ಸಂಪರ್ಕ ಹೊದಂತಹ ವ್ಯಕ್ತಿ ಎಂದು ತಿಳಿಸಿದರು.

ಇದೇ ವೇಳೆ ಯುವ ಕಾಂಗ್ರೇಸ್‌ನ ಜಿಲ್ಲಾಧ್ಯಕ್ಷ ಚೇತನ್ ದೂರೆರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವಸ್ವಾಮಿ, ಮುಖಂಡರಾದ ಪಾಳ್ಯ ಕೃಷ್ಣ, ಉದ್ದನೂರು ಸಿದ್ದರಾಜು, ಮಹಾದೇವ ಹಾಗೂ ಇನ್ನಿತರರು ಭಾಗವಹಿಸಿದ್ದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

7 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago