ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ ದೇವಿ
(49) ಅವರು ಮೃತಪಟ್ಟಿದ್ದು, ತಮ್ಮ ದೇಹವನ್ನು ಮಿಮ್ಸ್ಗೆ ದಾನ ಮಾಡುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಅನುಪಮ ಅವರ ಸಹೋದರಿಯಾದ ಸತ್ಯಭಾಮದೇವಿ ಅವರು ಕಳೆದ ಹಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಎಲ್ಲವನ್ನೂ ಮರೆತು ತಮ್ಮ ಮಗಳು ಹಾಗೂ ಕುಟುಂಬದವರ ಜತೆ ಸಂತಸದಿಂದ ಕಾಲ ಕಳೆಯುತ್ತಿದ್ದರು. ಆದರೆ, ಬೆಂಬಿಡದ ಕ್ಯಾನ್ಸರ್ ಕೊನೆಗೂ ಶನಿವಾರ ಬಲಿತೆಗೆದುಕೊಂಡಿದೆ.
ಆರೋಗ್ಯ ಕ್ಷೇತ್ರದಲ್ಲಿ ವೃತ್ತಿ ನಿರ್ವಹಿಸಿ, ಆರೋಗ್ಯದ ಮಹತ್ವ ಅರಿತಿದ್ದ ಸತ್ಯ ಅವರು ಆರೋಗ್ಯದ ಅಧ್ಯಯನದ ಉದ್ದೇಶದಿಂದ ತಮ್ಮ ದೇಹವನ್ನು ಮಿಮ್ಸ್ಗೆ ಹಸ್ತಾಂತರಿಸುವ ನಿರ್ಧಾರ ಮಾಡಿದ್ದರು. ಅಂತೆೆಯೇ ಅವರ ಕುಟುಂಬದವರು ಸತ್ಯ ಅವರ ದೇಹವನ್ನು ಮಿಮ್ಸ್ಗೆ ಶನಿವಾರ ಹಸ್ತಾಂತರಿಸಿದರು. ಇವರ ನಿಧನಕ್ಕೆ ಅಪಾರ ಸಅಹಿತ್ಯ ಬಳಗವು ಕಂಬನಿ ಮಿಡಿದಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…