ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ
ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಎಂಟು ಚಿರತೆಗಳು ಸೆರೆ ಸಿಕ್ಕಂತಾಗಿದೆ.
ಮಾಧವಗೆರೆ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಈ ಚಿರತೆಯ ಓಡಾಟ ಕಂಡು ಬಂದಿತ್ತು. ಮಾಧವಗೆರೆ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೋನನ್ನು ಇಡಲಾಗಿತ್ತು. ಬೋನಿನಲ್ಲಿ ಜೀವಂತ ಕೋಳಿ ಇರಿಸಿ ಕೊಟ್ಟಿಗೆ ಮಾದರಿಯಲ್ಲಿ ಸುತ್ತ ಮತ್ತ ಕಸ ಚೆಲ್ಲಲಾಗಿತ್ತು. ಕೋಳಿ ತಿನ್ನುವ ಆಸೆಯಿಂದ ಬಂದ ಚಿರತೆ ರಾತ್ರಿ ಬೋನಿಗೆ ಬಿದ್ದಿದೆ.
ಸುಮಾರು ಐದರಿಂದ ಆರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು ಕಾಣಲು ದಷ್ಟಪುಷ್ಟವಾಗಿದೆ. ಚಿರತೆಗೆ ಚಿಪ್ ಅಳವಡಿಸಿದ ಬಳಿಕ ಮೇಲಧಿಕಾರಿಗಳ ಆದೇಶದಂತೆ ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಆರ್ ಎಫ್ ಓ ಸುರೇಂದ್ರ, ಡಿಆರ್ಎಫ್ಓ ವಿಜಯಕುಮಾರ್, ಅರಣ್ಯ ರಕ್ಷಕ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರುಣ ಹೋಬಳಿ ವ್ಯಾಪ್ತಿಯ ಎಂಸಿ ಹುಂಡಿ, ಹೊಸಹಳ್ಳಿ, ಟಿ.ಎಂ.ಹುಂಡಿ, ಮಾದಿಗೆರೆ, ಪಿಲ್ಲಹಳ್ಳಿ, ಯಾಂದಹಳ್ಳಿ ಹಾಗೂ ಮಾದ ಶೆಟ್ಟಿ ಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಹಿನ್ನೆಲೆಯಲ್ಲಿ ನಾನಾ ಕಡೆ ಬೋನುಗಳನ್ನು ಇರಿಸಲಾಗಿದೆ. ಎಷ್ಟು ಚಿರತೆಗಳಿವೆ ಎಂಬ ಬಗ್ಗೆ ನಿಖರವಾದ ಮಾಹಿತಿಗಳಿಲ್ಲ. ಸಾರ್ವಜನಿಕರ ದೂರುಗಳನ್ನು ಆಲಿಸಿ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿ ಬೋನುಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…
ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…