ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ
ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಎಂಟು ಚಿರತೆಗಳು ಸೆರೆ ಸಿಕ್ಕಂತಾಗಿದೆ.
ಮಾಧವಗೆರೆ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಈ ಚಿರತೆಯ ಓಡಾಟ ಕಂಡು ಬಂದಿತ್ತು. ಮಾಧವಗೆರೆ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೋನನ್ನು ಇಡಲಾಗಿತ್ತು. ಬೋನಿನಲ್ಲಿ ಜೀವಂತ ಕೋಳಿ ಇರಿಸಿ ಕೊಟ್ಟಿಗೆ ಮಾದರಿಯಲ್ಲಿ ಸುತ್ತ ಮತ್ತ ಕಸ ಚೆಲ್ಲಲಾಗಿತ್ತು. ಕೋಳಿ ತಿನ್ನುವ ಆಸೆಯಿಂದ ಬಂದ ಚಿರತೆ ರಾತ್ರಿ ಬೋನಿಗೆ ಬಿದ್ದಿದೆ.
ಸುಮಾರು ಐದರಿಂದ ಆರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು ಕಾಣಲು ದಷ್ಟಪುಷ್ಟವಾಗಿದೆ. ಚಿರತೆಗೆ ಚಿಪ್ ಅಳವಡಿಸಿದ ಬಳಿಕ ಮೇಲಧಿಕಾರಿಗಳ ಆದೇಶದಂತೆ ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಆರ್ ಎಫ್ ಓ ಸುರೇಂದ್ರ, ಡಿಆರ್ಎಫ್ಓ ವಿಜಯಕುಮಾರ್, ಅರಣ್ಯ ರಕ್ಷಕ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರುಣ ಹೋಬಳಿ ವ್ಯಾಪ್ತಿಯ ಎಂಸಿ ಹುಂಡಿ, ಹೊಸಹಳ್ಳಿ, ಟಿ.ಎಂ.ಹುಂಡಿ, ಮಾದಿಗೆರೆ, ಪಿಲ್ಲಹಳ್ಳಿ, ಯಾಂದಹಳ್ಳಿ ಹಾಗೂ ಮಾದ ಶೆಟ್ಟಿ ಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಹಿನ್ನೆಲೆಯಲ್ಲಿ ನಾನಾ ಕಡೆ ಬೋನುಗಳನ್ನು ಇರಿಸಲಾಗಿದೆ. ಎಷ್ಟು ಚಿರತೆಗಳಿವೆ ಎಂಬ ಬಗ್ಗೆ ನಿಖರವಾದ ಮಾಹಿತಿಗಳಿಲ್ಲ. ಸಾರ್ವಜನಿಕರ ದೂರುಗಳನ್ನು ಆಲಿಸಿ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿ ಬೋನುಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…