ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ
ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಎಂಟು ಚಿರತೆಗಳು ಸೆರೆ ಸಿಕ್ಕಂತಾಗಿದೆ.
ಮಾಧವಗೆರೆ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಈ ಚಿರತೆಯ ಓಡಾಟ ಕಂಡು ಬಂದಿತ್ತು. ಮಾಧವಗೆರೆ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೋನನ್ನು ಇಡಲಾಗಿತ್ತು. ಬೋನಿನಲ್ಲಿ ಜೀವಂತ ಕೋಳಿ ಇರಿಸಿ ಕೊಟ್ಟಿಗೆ ಮಾದರಿಯಲ್ಲಿ ಸುತ್ತ ಮತ್ತ ಕಸ ಚೆಲ್ಲಲಾಗಿತ್ತು. ಕೋಳಿ ತಿನ್ನುವ ಆಸೆಯಿಂದ ಬಂದ ಚಿರತೆ ರಾತ್ರಿ ಬೋನಿಗೆ ಬಿದ್ದಿದೆ.
ಸುಮಾರು ಐದರಿಂದ ಆರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು ಕಾಣಲು ದಷ್ಟಪುಷ್ಟವಾಗಿದೆ. ಚಿರತೆಗೆ ಚಿಪ್ ಅಳವಡಿಸಿದ ಬಳಿಕ ಮೇಲಧಿಕಾರಿಗಳ ಆದೇಶದಂತೆ ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಆರ್ ಎಫ್ ಓ ಸುರೇಂದ್ರ, ಡಿಆರ್ಎಫ್ಓ ವಿಜಯಕುಮಾರ್, ಅರಣ್ಯ ರಕ್ಷಕ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರುಣ ಹೋಬಳಿ ವ್ಯಾಪ್ತಿಯ ಎಂಸಿ ಹುಂಡಿ, ಹೊಸಹಳ್ಳಿ, ಟಿ.ಎಂ.ಹುಂಡಿ, ಮಾದಿಗೆರೆ, ಪಿಲ್ಲಹಳ್ಳಿ, ಯಾಂದಹಳ್ಳಿ ಹಾಗೂ ಮಾದ ಶೆಟ್ಟಿ ಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಹಿನ್ನೆಲೆಯಲ್ಲಿ ನಾನಾ ಕಡೆ ಬೋನುಗಳನ್ನು ಇರಿಸಲಾಗಿದೆ. ಎಷ್ಟು ಚಿರತೆಗಳಿವೆ ಎಂಬ ಬಗ್ಗೆ ನಿಖರವಾದ ಮಾಹಿತಿಗಳಿಲ್ಲ. ಸಾರ್ವಜನಿಕರ ದೂರುಗಳನ್ನು ಆಲಿಸಿ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿ ಬೋನುಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…