ಜಿಲ್ಲೆಗಳು

ಮೈಸೂರಿನಲ್ಲಿ ಮತ್ತೊಂದು ಚಿರತೆ ಬೋನಿಗೆ

ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ

ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್‌ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಎಂಟು ಚಿರತೆಗಳು ಸೆರೆ ಸಿಕ್ಕಂತಾಗಿದೆ.

ಮಾಧವಗೆರೆ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಈ ಚಿರತೆಯ ಓಡಾಟ ಕಂಡು ಬಂದಿತ್ತು. ಮಾಧವಗೆರೆ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೋನನ್ನು ಇಡಲಾಗಿತ್ತು. ಬೋನಿನಲ್ಲಿ ಜೀವಂತ ಕೋಳಿ ಇರಿಸಿ ಕೊಟ್ಟಿಗೆ ಮಾದರಿಯಲ್ಲಿ ಸುತ್ತ ಮತ್ತ ಕಸ ಚೆಲ್ಲಲಾಗಿತ್ತು. ಕೋಳಿ ತಿನ್ನುವ ಆಸೆಯಿಂದ ಬಂದ ಚಿರತೆ ರಾತ್ರಿ ಬೋನಿಗೆ ಬಿದ್ದಿದೆ.

ಸುಮಾರು ಐದರಿಂದ ಆರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು ಕಾಣಲು ದಷ್ಟಪುಷ್ಟವಾಗಿದೆ. ಚಿರತೆಗೆ ಚಿಪ್‌ ಅಳವಡಿಸಿದ ಬಳಿಕ ಮೇಲಧಿಕಾರಿಗಳ ಆದೇಶದಂತೆ ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಆರ್ ಎಫ್ ಓ ಸುರೇಂದ್ರ, ಡಿಆರ್‌ಎಫ್‌ಓ ವಿಜಯಕುಮಾರ್, ಅರಣ್ಯ ರಕ್ಷಕ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


ವರುಣ ಹೋಬಳಿ ವ್ಯಾಪ್ತಿಯ ಎಂಸಿ ಹುಂಡಿ, ಹೊಸಹಳ್ಳಿ, ಟಿ.ಎಂ.ಹುಂಡಿ, ಮಾದಿಗೆರೆ, ಪಿಲ್ಲಹಳ್ಳಿ, ಯಾಂದಹಳ್ಳಿ ಹಾಗೂ ಮಾದ ಶೆಟ್ಟಿ ಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಹಿನ್ನೆಲೆಯಲ್ಲಿ ನಾನಾ ಕಡೆ ಬೋನುಗಳನ್ನು ಇರಿಸಲಾಗಿದೆ. ಎಷ್ಟು ಚಿರತೆಗಳಿವೆ ಎಂಬ ಬಗ್ಗೆ ನಿಖರವಾದ ಮಾಹಿತಿಗಳಿಲ್ಲ. ಸಾರ್ವಜನಿಕರ ದೂರುಗಳನ್ನು ಆಲಿಸಿ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿ ಬೋನುಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

7 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

13 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

13 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago