ಮೈಸೂರು ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ಎಂಟು ಚಿರತೆಗಳು ಬೋನಿಗೆ
ಮೈಸೂರು:ಜಿಲ್ಲೆಯಲ್ಲಿ ಚಿರತೆಗಳ ಸೆರೆ ಕಾರ್ಯಾಚರಣೆ ಮುಂದುವರಿದಿದೆ. ತಾಲ್ಲೂಕಿನ ವರುಣಾ ಪೊಲೀಸ್ ಠಾಣೆಗೆ ಸೇರಿದ ಮಾಧವಗೆರೆ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಗುರುವಾರ ಬೋನಿಗೆ ಬಿದ್ದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಎಂಟು ಚಿರತೆಗಳು ಸೆರೆ ಸಿಕ್ಕಂತಾಗಿದೆ.
ಮಾಧವಗೆರೆ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಈ ಚಿರತೆಯ ಓಡಾಟ ಕಂಡು ಬಂದಿತ್ತು. ಮಾಧವಗೆರೆ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಅವರ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೋನನ್ನು ಇಡಲಾಗಿತ್ತು. ಬೋನಿನಲ್ಲಿ ಜೀವಂತ ಕೋಳಿ ಇರಿಸಿ ಕೊಟ್ಟಿಗೆ ಮಾದರಿಯಲ್ಲಿ ಸುತ್ತ ಮತ್ತ ಕಸ ಚೆಲ್ಲಲಾಗಿತ್ತು. ಕೋಳಿ ತಿನ್ನುವ ಆಸೆಯಿಂದ ಬಂದ ಚಿರತೆ ರಾತ್ರಿ ಬೋನಿಗೆ ಬಿದ್ದಿದೆ.
ಸುಮಾರು ಐದರಿಂದ ಆರು ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು ಕಾಣಲು ದಷ್ಟಪುಷ್ಟವಾಗಿದೆ. ಚಿರತೆಗೆ ಚಿಪ್ ಅಳವಡಿಸಿದ ಬಳಿಕ ಮೇಲಧಿಕಾರಿಗಳ ಆದೇಶದಂತೆ ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ತಿಳಿಸಿದ್ದಾರೆ.
ಆರ್ ಎಫ್ ಓ ಸುರೇಂದ್ರ, ಡಿಆರ್ಎಫ್ಓ ವಿಜಯಕುಮಾರ್, ಅರಣ್ಯ ರಕ್ಷಕ ಜಗದೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ವರುಣ ಹೋಬಳಿ ವ್ಯಾಪ್ತಿಯ ಎಂಸಿ ಹುಂಡಿ, ಹೊಸಹಳ್ಳಿ, ಟಿ.ಎಂ.ಹುಂಡಿ, ಮಾದಿಗೆರೆ, ಪಿಲ್ಲಹಳ್ಳಿ, ಯಾಂದಹಳ್ಳಿ ಹಾಗೂ ಮಾದ ಶೆಟ್ಟಿ ಹಳ್ಳಿ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ಹಿನ್ನೆಲೆಯಲ್ಲಿ ನಾನಾ ಕಡೆ ಬೋನುಗಳನ್ನು ಇರಿಸಲಾಗಿದೆ. ಎಷ್ಟು ಚಿರತೆಗಳಿವೆ ಎಂಬ ಬಗ್ಗೆ ನಿಖರವಾದ ಮಾಹಿತಿಗಳಿಲ್ಲ. ಸಾರ್ವಜನಿಕರ ದೂರುಗಳನ್ನು ಆಲಿಸಿ ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿ ಬೋನುಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…