ಜಿಲ್ಲೆಗಳು

ಬ್ರಾಹ್ಮಣ ಸಮುದಾಯ ಪ.ಮಲ್ಲೇಶ್ ವಿರುದ್ಧ ಹೋರಾಟವನ್ನು ಮುಂದುವರಿಸಬಾರದು; ಕೆ.ಎಸ್.ಶಿವರಾಮ್

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ವಿಷಾಧಿಸಿದ್ದಾರೆ. ಹಾಗಾಗಿ ಈ ಹೋರಾಟವನ್ನು ಮುಂದುವರಿಸುವುದು ಬೇಡ ಎಲ್ಲರು ಸೌಹಾರ್ದತೆಯಾಗಿ ಹೋಗೋಣ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮ್ ಮನವಿ ಮಾಡಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಯನ್ನು ನಾವು ಸಮರ್ಥನೆ ಮಾಡುತ್ತಿಲ್ಲ. ಈ ಬಗ್ಗೆ ಪ.ಮಲ್ಲೇಶ್ ಅವರು ಕೂಡ ವಿಷಾಧ ವ್ಯಕ್ತಪಡಿಸಿದ್ದಾರೆ. ತಪ್ಪು ಮಾಡುವುದು ಮನುಷ್ಯನ ಸಹಜ ಗುಣ. ಆ ತಪ್ಪನ್ನು ಒಪ್ಪಿಕೊಂಡು ಸರಿಯಾಗಿ ನಡೆಯಬೇಕು. ಪ.ಮಲ್ಲೇಶ್ ಅವರು  ಪೂರ್ವಕವಾಗಿ ಮಾತಾಡಿಲ್ಲ. ಹಾಗಾಗಿ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವಂತೆ ಕೋರಿದರು.

ಬ್ರಾಹ್ಮಣ್ಯದ ವಿರುದ್ಧವೇ ನಮ್ಮ ಹೋರಾಟವೇ ಹೊರತು ಬ್ರಾಹ್ಮಣ ಸಮುದಾಯದ ವಿರುದ್ಧವಲ್ಲ. ಇದನ್ನು ಸಮುದಾಯದ ಅರ್ಥ ಮಾಡಿಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷ ಕಳೆದರು ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತವಾಗಿದೆ. ಇದಕ್ಕೆ ಇತ್ತೀಚಿನ ಉದಾಹರಣೆ ಚಾಮರಾಜನಗರದ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮಹಿಳೆ ನೀರು ಕುಡಿದ ಕಾರಣಕ್ಕೆ ಗೋ ಮೂತ್ರದ ಮೂಲಕ ಟ್ಯಾಂಕ್ ಸ್ವಚ್ಛಗೊಳಿಸಲಾಗಿದೆ. ಈ ಹೀನಾ ಕೃತ್ಯದ ಬಗ್ಗೆ ಯಾರೊಬ್ಬರು ಮಾತಾಡುತ್ತಿಲ್ಲ. ಈ ಪ್ರಕರಣಕ್ಕೆ ಹೊಣೆಯಾರು? ಮೇಲ್ವರ್ಗದ ಎಷ್ಟು ಜನ ಇದನ್ನು ಖಂಡಿಸಿದ್ದಾರೆ ಎಂದು ಪ್ರಶ್ನಿಸಿದರು.

ಶತ ಶತಮಾನದಿಂದ ಶೋಷಿತರು ಅನುಭವಿಸಿರುವ ಅಸ್ಪ್ತ್ಯೃಶ್ಯತೆ ನೋವನ್ನು ಬ್ರಾಹ್ಮಣ ಸಮುದಾಯ ಅರ್ಥ ಮಾಡಿಕೊಳ್ಳಬೇಕು. ನನ್ನ ಈ ಮಾತು ಇಡೀ ಬ್ರಾಹ್ಮಣ ಸಮುದಾಯದಕ್ಕೆ ಅನ್ವಿಸುವುದಿಲ್ಲ. ಕಾರಣ ಅಲ್ಲಿಯ ಪ್ರಗತಿಪರವಾಗಿ ಅಲೋಚಿಸುವ ಅಸ್ಪೃಶ್ಯತೆಯನ್ನು ಖಂಡಿಸುವ ಮನಸ್ಸುಗಳಿವೆ? ಆದರೆ, ಅಲ್ಲಿನ ಕೆಲ ಪಟ್ಟಭದ್ರಹಿತಾಸಕ್ತಿಗಳು ಶೋಷಣೆಯನ್ನು ಮುಂದುವರಿಸುವೆ ಇವುಗಳನ್ನು ದೂಷಣೆ ಮಾಡುತ್ತೇವೆ ಎಂದರು.

ಪ.ಮಲ್ಲೇಶ್ ಅವರು ಸಮಾಜವಾದಿ ಹಿನ್ನೆಲೆಯ ಮೂಲಕ ಹಲವಾರು ಹೋರಾಟಗಳನ್ನು ಮಾಡಿರುವ ಹಿರಿಯ ಜೀವ. ಅವರು ತಮ್ಮ ತಪ್ಪಿಗೆ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಅಸ್ಪಶ್ಯತೆ ಆಚರಣೆಯನ್ನು ಖಂಡಿಸಿ ಬ್ರಾಹ್ಮಣ ಮತ್ತು ಮೇಲ್ವರ್ಗದ ಸಮುದಾಯಗಳು ಯಾಕೇ ಪ್ರತಿಭಟನೆ ಮಾಡುತ್ತಿಲ್ಲ. ನಿಮಗೆ ನೋವಾದರೆ ಮಾತ್ರ ನೋವೆ? ನಮ್ಮ ನೋವುಗಳು ನಿಮಗೆ ಕಾಣುವುದಿಲ್ಲವೇ ಅಥವಾ ಪರೋಷವಾಗಿ ಅಸ್ಪಶ್ಯತೆ ಆಚರಣೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದೀರಾ? ನಿಜವಾಗಿಯೂ ಹಿಂದೂ ಧರ್ಮದ ಬಗ್ಗೆ ಕಾಳಜಿ ಇದ್ದರೆ ಅಸ್ಪಶ್ಯತೆ ಆಚರಣೆಯ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿ ಎಂದು ಸವಾಲು ಹಾಕಿದರು.

ಹಿಂದೂ ಧರ್ಮದ ಬಗ್ಗೆ ನಮಗೂ ಕೀಳಿರಿಮೆ ಇಲ್ಲ. ಆದರೆ, ದೇವರು-ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಅನಾಚರಗಳನ್ನು ಹಿಂದೂ ಧರ್ಮದ ಸಂಸ್ಕೃತಿಯೆಂದು ಸಮರ್ಥನೆ ಮಾಡಿಕೊಳ್ಳುವ ಮನಸ್ಥಿತಿ ಮತ್ತು ಹಿಂದೂ ಧರ್ಮದಲ್ಲಿರುವ ಅಸಮಾನತೆಂ ವಿರುದ್ಧ ನಮ್ಮ ಹೋರಾಟ. ನಾವು ಇಡೀ ಬ್ರಾಹ್ಮಣ ಸಮುದಾದಂ ವಿರೋಧಿಗಳಲ್ಲ. ಪ್ರಸ್ತುತ ನಮಗೆ ಬೇಕಿರುವುದು ಶಾಂತಿ-ಸೌಹಾರ್ದತೆಂ ಸಮಾಜ. ಹೀಗಾಗಿ ಅಸಮಾನತೆಂನ್ನು ಹೊಗಲಾಡಿಸುವ ನಿಟ್ಟಿನಲ್ಲಿ ಕೈ ಜೋಡಿಸಿ ಹೋರಾಟ ಮಾಡಿ ಎಂದು ಸವಾಲು ಹಾಕಿದರು.

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago