ಜಿಲ್ಲೆಗಳು

ಮೈಸೂರು: ಮಗಳನ್ನು ಮದುವೆ ಮಾಡಿಕೊಡುವುದಾಗಿ ಯುವಕನಿಗೆ 25 ಲಕ್ಷ ವಂಚಿಸಿದ ಕುಟುಂಬ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿಯಲ್ಲಿ ಯುವಕನೋರ್ವನಿಗೆ ತಮ್ಮ ಮಗಳನ್ನು ಮದುವೆ ಮಾಡಿಸಿಕೊಡುವುದಾಗಿ ಕುಟುಂಬವೊಂದು ವಂಚಿಸಿದ ಪ್ರಕರಣ ನಡೆದಿದೆ.

ಅಶೋಕ್‌ ಎಂಬಾತ ಹಣ ಕಳೆದುಕೊಂಡಿದ್ದು, ಕನ್ಯೆ ಕೊಡಲಿಲ್ಲ ಹಾಗೂ ಅತ್ತ ಸಾಲದ ರೂಪದಲ್ಲಿ ಕೊಟ್ಟ ಹಣವನ್ನೂ ಸಹ ವಾಪಸ್‌ ಕೊಡಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಇದೇ ಗ್ರಾಮದ ಯುವತಿ ಸಿಂಚನ, ಆಕೆಯ ತಂದೆ ವೆಂಕಟೇಶ್‌ ಹಾಗೂ ತಾಯಿ ಲಕ್ಷ್ಮಿ ವಿರುದ್ಧ ದೂರು ದಾಖಲಿಸಿದ್ದಾನೆ.

ಅಶೋಕ್‌ ತನ್ನ ತಂದೆ ಹಾಗೂ ತಾಯಿ ಜತೆ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿಯಲ್ಲಿ ವಾಸವಿದ್ದು, ಬ್ಯುಸಿನೆಸ್ ಕರೆಸ್ಪಾಂಡಿಂಗ್ಸ್‌ ಹಾಗೂ ವ್ಯವಸಾಯ ಮಾಡುತ್ತಿದ್ದಾನೆ. ಇದೇ ಗ್ರಾಮದ ವೆಂಕಟೇಶ್‌ ಹಾಗೂ ಲಕ್ಷ್ಮಿ ದಂಪತಿ ತಮ್ಮ ಮಗಳಾದ ಸಿಂಚನಳನ್ನು ಮದುವೆಯಾಗುವಂತೆ 2022ರ ಜನವರಿಯಲ್ಲಿ ಅಶೋಕ್‌ ಅವರ ಮನೆಗೆ ಹೋಗಿದ್ದಾರೆ. ಇದಕ್ಕೆ ಅಶೋಕ್‌ ಪೋಷಕರೂ ಸಹ ಒಪ್ಪಿಗೆ ಸೂಚಿಸಿದ್ದಾರೆ.

ಆದರೆ ಯುವತಿ ಸಿಂಚನ ತಾನು ಇನ್ನೂ ಒಂದು ವರ್ಷ ವಿದ್ಯಾಭ್ಯಾಸ ಮಾಡಬೇಕು ಎಂದು ಹೇಳಿದ್ದು, ಇದಕ್ಕೆ ಅಶೋಕ್‌ ಪೋಷಕರು ಒಪ್ಪಿಗೆ ನೀಡಿದ್ದಾರೆ. ಬಳಿಕ ಎರಡೂ ಕುಟುಂಬದವರು ವಿವಾಹದ ಮಾತುಕತೆಯನ್ನು ನಡೆಸಿದ್ದರು. ಬಳಿಕ ಸಿಂಚನ ಹಾಗೂ ಅಶೋಕ್‌ ದೂರವಾಣಿಯಲ್ಲಿ ಮಾತನಾಡಲು ಆರಂಭಿಸಿದ್ದು, ಸಿಂಚನ ತನ್ನ ಮನೆಯ ಕಷ್ಟಗಳನ್ನೆಲ್ಲ ಅಶೋಕ್ ಬಳಿ ಹೇಳಿಕೊಂಡಿದ್ದಾರೆ. ಅಲ್ಲದೇ ವ್ಯವಸಾಯ ಮಾಡಲು ಮತ್ತು ವ್ಯವಸಾಯದಿಂದ ಸಾಲ ಮಾಡಿದ ಕಾರಣ ನೀಡಿ ಸಿಂಚನ ತಂದೆ 15 ಲಕ್ಷ, ಸಿಂಚನ ತಾಯಿ 8 ಲಕ್ಷ ಹಾಗೂ ಸಿಂಚನ ವಿದ್ಯಾಭ್ಯಾಸಕ್ಕಾಗಿ 2 ಲಕ್ಷ ರೂಪಾಯಿಗಳನ್ನು ಪಡೆದು ಮೋಸ ಮಾಡಿದ್ದಾರೆ ಎಂದು ಅಶೋಕ್‌ ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

andolana

Recent Posts

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

20 mins ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

2 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

5 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

5 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

5 hours ago