ಜಿಲ್ಲೆಗಳು

ಬೆಳಗನಹಳ್ಳಿ ಸೇತುವೆ ಮತ್ತೊಮ್ಮೆ ಜಲಾವೃತ

ಹೆಬ್ಬಾಳ ಜಲಾಶಯ ಕೋಡಿ ಬಿದ್ದು ಅವಾಂತರ; ಹಲವು ಗ್ರಾಮಗಳ ಸಂಚಾರ ಸ್ಥಗಿತ

ಮಂಜು ಕೋಟೆ
ಎಚ್.ಡಿ.ಕೋಟೆ: ಭಾರಿ ಮಳೆಯಿಂದಾಗಿ ಪಟ್ಟಣದ ಬೆಳಗನಹಳ್ಳಿ ರಸ್ತೆ ಸೇತುವೆ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿ ಜನ ಸಾವಾನ್ಯರ ಪರಿಸ್ಥಿತಿ ಪರದಾಡುವಂತಾಗಿದೆ.
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಹೆಬ್ಬಾಳದ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಬೆಳಗನಹಳ್ಳಿ ಸೇತುವೆ ಜಲಾವೃತಗೊಂಡು ಭಾಗದ ಅನೇಕ ಗ್ರಾಮಗಳ ಕೆಲಸಮಾನ್ಯರ ಸಂಚಾರ ಸ್ಥಗಿತಗೊಂಡು ಶಾಲಾ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು, ಕೂಲಿ ಕಾರ್ಮಿಕರು ಪಟ್ಟಣಕ್ಕೆ ಪರ್ಯಾಯ ರಸ್ತೆ ಮತ್ತು ಜಮೀನುಗಳು ತೋಟಗಳ ಮುಖಾಂತರ ಬರಬೇಕಾಗಿತ್ತು. ಮತ್ತೆ ಕೆಲವರು ಪ್ರಾಣದ ಹಂಗು ತೊರೆದು ನೀರು ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬರುತ್ತಿದ್ದರು.

೬ ತಿಂಗಳಿನಿಂದ ೪ ಬಾರಿ ಜಲಾವೃತಗೊಂಡಿರುವ ಈ ಸೇತುವೆಯಿಂದಾಗಿ ಈ ಭಾಗದ ಜನರಿಗೆ ಮಳೆ ಬಂದರೆ ದೊಡ್ಡ ಆಘಾತವೇ ಎದುರಾಗಲಿದೆ . ಸೇತುವೆ ಅನೇಕ ಬಾರಿ ಜಲಾವೃತಗೊಂಡಿರುವುದರಿಂದ ಸೇತುವೆ ಅಕ್ಕಪಕ್ಕದ ತಡೆಗೋಡೆ ಮುರಿದು ಬಿದ್ದಿದ್ದು ಸೇತುವೆ ಸಹ ದುಸ್ಥಿತಿಗೆ ಬಂದಿದೆ. ಹೀಗಾಗಿ ನೀರಿನ ಪ್ರವಾಣ ಕಡಿಮೆಯಾದರೂ ಈ ಸೇತುವೆ ಮೇಲೆ ಸಂಚರಿಸಲು ಜನರು ಭಯಪಡುವಂತಾಗಿದೆ.
ತಾರಕ ಜಲಾಶುಂದ ನೀರಾವರಿ ಇಲಾಖೆಯ ಅಧಿಕಾರಿಗಳು ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲು ಅನೇಕ ಬಾರಿ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸೇತುವೆಯಿಂದ ಆಗುವ ದುರಂತವನ್ನು ತಪ್ಪಿಸಲು ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ವಹಿಸಬೇಕಾಗಿದೆ.


ಪ್ರತಿನಿತ್ಯ ರಸ್ತೆ ಸೇತುವೆ ಮೇಲೆ ಕೂಲಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸಿ ಜೀವನ ವಾಡಬೇಕಾಗಿದೆ. ಸೇತುವೆ ಹೀಗೆ ಆಗಾಗ್ಗೆ ಜಲಾವೃತವಾದರೆ ನಾವು ಬದುಕು ಕಟ್ಟಿಕೊಳ್ಳಲು ಮತ್ತು ಜೀವನ ವಾಡಲು ಹೇಗೆ ಸಾಧ್ಯ? ಅಧಿಕಾರಿಗಳು, ಜನಪ್ರತಿನಿಧಿಗಳು ಸೇತುವೆ ಅಭಿವೃದ್ಧಿಗೆ ಮುಂದಾಗಬೇಕು.

ಪ್ರಕಾಶ್, ತೊರೊಳ್ಳಿ ನಿವಾಸಿ.

andolanait

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

8 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

9 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

9 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

9 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

10 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

10 hours ago