ಹೆಬ್ಬಾಳ ಜಲಾಶಯ ಕೋಡಿ ಬಿದ್ದು ಅವಾಂತರ; ಹಲವು ಗ್ರಾಮಗಳ ಸಂಚಾರ ಸ್ಥಗಿತ
ಮಂಜು ಕೋಟೆ
ಎಚ್.ಡಿ.ಕೋಟೆ: ಭಾರಿ ಮಳೆಯಿಂದಾಗಿ ಪಟ್ಟಣದ ಬೆಳಗನಹಳ್ಳಿ ರಸ್ತೆ ಸೇತುವೆ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿ ಜನ ಸಾವಾನ್ಯರ ಪರಿಸ್ಥಿತಿ ಪರದಾಡುವಂತಾಗಿದೆ.
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಹೆಬ್ಬಾಳದ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಬೆಳಗನಹಳ್ಳಿ ಸೇತುವೆ ಜಲಾವೃತಗೊಂಡು ಭಾಗದ ಅನೇಕ ಗ್ರಾಮಗಳ ಕೆಲಸಮಾನ್ಯರ ಸಂಚಾರ ಸ್ಥಗಿತಗೊಂಡು ಶಾಲಾ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು, ಕೂಲಿ ಕಾರ್ಮಿಕರು ಪಟ್ಟಣಕ್ಕೆ ಪರ್ಯಾಯ ರಸ್ತೆ ಮತ್ತು ಜಮೀನುಗಳು ತೋಟಗಳ ಮುಖಾಂತರ ಬರಬೇಕಾಗಿತ್ತು. ಮತ್ತೆ ಕೆಲವರು ಪ್ರಾಣದ ಹಂಗು ತೊರೆದು ನೀರು ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬರುತ್ತಿದ್ದರು.
೬ ತಿಂಗಳಿನಿಂದ ೪ ಬಾರಿ ಜಲಾವೃತಗೊಂಡಿರುವ ಈ ಸೇತುವೆಯಿಂದಾಗಿ ಈ ಭಾಗದ ಜನರಿಗೆ ಮಳೆ ಬಂದರೆ ದೊಡ್ಡ ಆಘಾತವೇ ಎದುರಾಗಲಿದೆ . ಸೇತುವೆ ಅನೇಕ ಬಾರಿ ಜಲಾವೃತಗೊಂಡಿರುವುದರಿಂದ ಸೇತುವೆ ಅಕ್ಕಪಕ್ಕದ ತಡೆಗೋಡೆ ಮುರಿದು ಬಿದ್ದಿದ್ದು ಸೇತುವೆ ಸಹ ದುಸ್ಥಿತಿಗೆ ಬಂದಿದೆ. ಹೀಗಾಗಿ ನೀರಿನ ಪ್ರವಾಣ ಕಡಿಮೆಯಾದರೂ ಈ ಸೇತುವೆ ಮೇಲೆ ಸಂಚರಿಸಲು ಜನರು ಭಯಪಡುವಂತಾಗಿದೆ.
ತಾರಕ ಜಲಾಶುಂದ ನೀರಾವರಿ ಇಲಾಖೆಯ ಅಧಿಕಾರಿಗಳು ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲು ಅನೇಕ ಬಾರಿ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸೇತುವೆಯಿಂದ ಆಗುವ ದುರಂತವನ್ನು ತಪ್ಪಿಸಲು ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ವಹಿಸಬೇಕಾಗಿದೆ.
ಪ್ರತಿನಿತ್ಯ ರಸ್ತೆ ಸೇತುವೆ ಮೇಲೆ ಕೂಲಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸಿ ಜೀವನ ವಾಡಬೇಕಾಗಿದೆ. ಸೇತುವೆ ಹೀಗೆ ಆಗಾಗ್ಗೆ ಜಲಾವೃತವಾದರೆ ನಾವು ಬದುಕು ಕಟ್ಟಿಕೊಳ್ಳಲು ಮತ್ತು ಜೀವನ ವಾಡಲು ಹೇಗೆ ಸಾಧ್ಯ? ಅಧಿಕಾರಿಗಳು, ಜನಪ್ರತಿನಿಧಿಗಳು ಸೇತುವೆ ಅಭಿವೃದ್ಧಿಗೆ ಮುಂದಾಗಬೇಕು.
–ಪ್ರಕಾಶ್, ತೊರೊಳ್ಳಿ ನಿವಾಸಿ.
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…
ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…