ಹೆಬ್ಬಾಳ ಜಲಾಶಯ ಕೋಡಿ ಬಿದ್ದು ಅವಾಂತರ; ಹಲವು ಗ್ರಾಮಗಳ ಸಂಚಾರ ಸ್ಥಗಿತ
ಮಂಜು ಕೋಟೆ
ಎಚ್.ಡಿ.ಕೋಟೆ: ಭಾರಿ ಮಳೆಯಿಂದಾಗಿ ಪಟ್ಟಣದ ಬೆಳಗನಹಳ್ಳಿ ರಸ್ತೆ ಸೇತುವೆ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿ ಜನ ಸಾವಾನ್ಯರ ಪರಿಸ್ಥಿತಿ ಪರದಾಡುವಂತಾಗಿದೆ.
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಹೆಬ್ಬಾಳದ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಬೆಳಗನಹಳ್ಳಿ ಸೇತುವೆ ಜಲಾವೃತಗೊಂಡು ಭಾಗದ ಅನೇಕ ಗ್ರಾಮಗಳ ಕೆಲಸಮಾನ್ಯರ ಸಂಚಾರ ಸ್ಥಗಿತಗೊಂಡು ಶಾಲಾ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು, ಕೂಲಿ ಕಾರ್ಮಿಕರು ಪಟ್ಟಣಕ್ಕೆ ಪರ್ಯಾಯ ರಸ್ತೆ ಮತ್ತು ಜಮೀನುಗಳು ತೋಟಗಳ ಮುಖಾಂತರ ಬರಬೇಕಾಗಿತ್ತು. ಮತ್ತೆ ಕೆಲವರು ಪ್ರಾಣದ ಹಂಗು ತೊರೆದು ನೀರು ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬರುತ್ತಿದ್ದರು.
೬ ತಿಂಗಳಿನಿಂದ ೪ ಬಾರಿ ಜಲಾವೃತಗೊಂಡಿರುವ ಈ ಸೇತುವೆಯಿಂದಾಗಿ ಈ ಭಾಗದ ಜನರಿಗೆ ಮಳೆ ಬಂದರೆ ದೊಡ್ಡ ಆಘಾತವೇ ಎದುರಾಗಲಿದೆ . ಸೇತುವೆ ಅನೇಕ ಬಾರಿ ಜಲಾವೃತಗೊಂಡಿರುವುದರಿಂದ ಸೇತುವೆ ಅಕ್ಕಪಕ್ಕದ ತಡೆಗೋಡೆ ಮುರಿದು ಬಿದ್ದಿದ್ದು ಸೇತುವೆ ಸಹ ದುಸ್ಥಿತಿಗೆ ಬಂದಿದೆ. ಹೀಗಾಗಿ ನೀರಿನ ಪ್ರವಾಣ ಕಡಿಮೆಯಾದರೂ ಈ ಸೇತುವೆ ಮೇಲೆ ಸಂಚರಿಸಲು ಜನರು ಭಯಪಡುವಂತಾಗಿದೆ.
ತಾರಕ ಜಲಾಶುಂದ ನೀರಾವರಿ ಇಲಾಖೆಯ ಅಧಿಕಾರಿಗಳು ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲು ಅನೇಕ ಬಾರಿ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸೇತುವೆಯಿಂದ ಆಗುವ ದುರಂತವನ್ನು ತಪ್ಪಿಸಲು ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ವಹಿಸಬೇಕಾಗಿದೆ.
ಪ್ರತಿನಿತ್ಯ ರಸ್ತೆ ಸೇತುವೆ ಮೇಲೆ ಕೂಲಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸಿ ಜೀವನ ವಾಡಬೇಕಾಗಿದೆ. ಸೇತುವೆ ಹೀಗೆ ಆಗಾಗ್ಗೆ ಜಲಾವೃತವಾದರೆ ನಾವು ಬದುಕು ಕಟ್ಟಿಕೊಳ್ಳಲು ಮತ್ತು ಜೀವನ ವಾಡಲು ಹೇಗೆ ಸಾಧ್ಯ? ಅಧಿಕಾರಿಗಳು, ಜನಪ್ರತಿನಿಧಿಗಳು ಸೇತುವೆ ಅಭಿವೃದ್ಧಿಗೆ ಮುಂದಾಗಬೇಕು.
–ಪ್ರಕಾಶ್, ತೊರೊಳ್ಳಿ ನಿವಾಸಿ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…