ಹೆಬ್ಬಾಳ ಜಲಾಶಯ ಕೋಡಿ ಬಿದ್ದು ಅವಾಂತರ; ಹಲವು ಗ್ರಾಮಗಳ ಸಂಚಾರ ಸ್ಥಗಿತ
ಮಂಜು ಕೋಟೆ
ಎಚ್.ಡಿ.ಕೋಟೆ: ಭಾರಿ ಮಳೆಯಿಂದಾಗಿ ಪಟ್ಟಣದ ಬೆಳಗನಹಳ್ಳಿ ರಸ್ತೆ ಸೇತುವೆ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿ ಜನ ಸಾವಾನ್ಯರ ಪರಿಸ್ಥಿತಿ ಪರದಾಡುವಂತಾಗಿದೆ.
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಹೆಬ್ಬಾಳದ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಬೆಳಗನಹಳ್ಳಿ ಸೇತುವೆ ಜಲಾವೃತಗೊಂಡು ಭಾಗದ ಅನೇಕ ಗ್ರಾಮಗಳ ಕೆಲಸಮಾನ್ಯರ ಸಂಚಾರ ಸ್ಥಗಿತಗೊಂಡು ಶಾಲಾ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು, ಕೂಲಿ ಕಾರ್ಮಿಕರು ಪಟ್ಟಣಕ್ಕೆ ಪರ್ಯಾಯ ರಸ್ತೆ ಮತ್ತು ಜಮೀನುಗಳು ತೋಟಗಳ ಮುಖಾಂತರ ಬರಬೇಕಾಗಿತ್ತು. ಮತ್ತೆ ಕೆಲವರು ಪ್ರಾಣದ ಹಂಗು ತೊರೆದು ನೀರು ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬರುತ್ತಿದ್ದರು.
೬ ತಿಂಗಳಿನಿಂದ ೪ ಬಾರಿ ಜಲಾವೃತಗೊಂಡಿರುವ ಈ ಸೇತುವೆಯಿಂದಾಗಿ ಈ ಭಾಗದ ಜನರಿಗೆ ಮಳೆ ಬಂದರೆ ದೊಡ್ಡ ಆಘಾತವೇ ಎದುರಾಗಲಿದೆ . ಸೇತುವೆ ಅನೇಕ ಬಾರಿ ಜಲಾವೃತಗೊಂಡಿರುವುದರಿಂದ ಸೇತುವೆ ಅಕ್ಕಪಕ್ಕದ ತಡೆಗೋಡೆ ಮುರಿದು ಬಿದ್ದಿದ್ದು ಸೇತುವೆ ಸಹ ದುಸ್ಥಿತಿಗೆ ಬಂದಿದೆ. ಹೀಗಾಗಿ ನೀರಿನ ಪ್ರವಾಣ ಕಡಿಮೆಯಾದರೂ ಈ ಸೇತುವೆ ಮೇಲೆ ಸಂಚರಿಸಲು ಜನರು ಭಯಪಡುವಂತಾಗಿದೆ.
ತಾರಕ ಜಲಾಶುಂದ ನೀರಾವರಿ ಇಲಾಖೆಯ ಅಧಿಕಾರಿಗಳು ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲು ಅನೇಕ ಬಾರಿ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸೇತುವೆಯಿಂದ ಆಗುವ ದುರಂತವನ್ನು ತಪ್ಪಿಸಲು ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ವಹಿಸಬೇಕಾಗಿದೆ.
ಪ್ರತಿನಿತ್ಯ ರಸ್ತೆ ಸೇತುವೆ ಮೇಲೆ ಕೂಲಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸಿ ಜೀವನ ವಾಡಬೇಕಾಗಿದೆ. ಸೇತುವೆ ಹೀಗೆ ಆಗಾಗ್ಗೆ ಜಲಾವೃತವಾದರೆ ನಾವು ಬದುಕು ಕಟ್ಟಿಕೊಳ್ಳಲು ಮತ್ತು ಜೀವನ ವಾಡಲು ಹೇಗೆ ಸಾಧ್ಯ? ಅಧಿಕಾರಿಗಳು, ಜನಪ್ರತಿನಿಧಿಗಳು ಸೇತುವೆ ಅಭಿವೃದ್ಧಿಗೆ ಮುಂದಾಗಬೇಕು.
–ಪ್ರಕಾಶ್, ತೊರೊಳ್ಳಿ ನಿವಾಸಿ.
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…