ಜಿಲ್ಲೆಗಳು

ಬೆಳಗನಹಳ್ಳಿ ಸೇತುವೆ ಮತ್ತೊಮ್ಮೆ ಜಲಾವೃತ

ಹೆಬ್ಬಾಳ ಜಲಾಶಯ ಕೋಡಿ ಬಿದ್ದು ಅವಾಂತರ; ಹಲವು ಗ್ರಾಮಗಳ ಸಂಚಾರ ಸ್ಥಗಿತ

ಮಂಜು ಕೋಟೆ
ಎಚ್.ಡಿ.ಕೋಟೆ: ಭಾರಿ ಮಳೆಯಿಂದಾಗಿ ಪಟ್ಟಣದ ಬೆಳಗನಹಳ್ಳಿ ರಸ್ತೆ ಸೇತುವೆ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿ ಜನ ಸಾವಾನ್ಯರ ಪರಿಸ್ಥಿತಿ ಪರದಾಡುವಂತಾಗಿದೆ.
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಹೆಬ್ಬಾಳದ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಬೆಳಗನಹಳ್ಳಿ ಸೇತುವೆ ಜಲಾವೃತಗೊಂಡು ಭಾಗದ ಅನೇಕ ಗ್ರಾಮಗಳ ಕೆಲಸಮಾನ್ಯರ ಸಂಚಾರ ಸ್ಥಗಿತಗೊಂಡು ಶಾಲಾ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು, ಕೂಲಿ ಕಾರ್ಮಿಕರು ಪಟ್ಟಣಕ್ಕೆ ಪರ್ಯಾಯ ರಸ್ತೆ ಮತ್ತು ಜಮೀನುಗಳು ತೋಟಗಳ ಮುಖಾಂತರ ಬರಬೇಕಾಗಿತ್ತು. ಮತ್ತೆ ಕೆಲವರು ಪ್ರಾಣದ ಹಂಗು ತೊರೆದು ನೀರು ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬರುತ್ತಿದ್ದರು.

೬ ತಿಂಗಳಿನಿಂದ ೪ ಬಾರಿ ಜಲಾವೃತಗೊಂಡಿರುವ ಈ ಸೇತುವೆಯಿಂದಾಗಿ ಈ ಭಾಗದ ಜನರಿಗೆ ಮಳೆ ಬಂದರೆ ದೊಡ್ಡ ಆಘಾತವೇ ಎದುರಾಗಲಿದೆ . ಸೇತುವೆ ಅನೇಕ ಬಾರಿ ಜಲಾವೃತಗೊಂಡಿರುವುದರಿಂದ ಸೇತುವೆ ಅಕ್ಕಪಕ್ಕದ ತಡೆಗೋಡೆ ಮುರಿದು ಬಿದ್ದಿದ್ದು ಸೇತುವೆ ಸಹ ದುಸ್ಥಿತಿಗೆ ಬಂದಿದೆ. ಹೀಗಾಗಿ ನೀರಿನ ಪ್ರವಾಣ ಕಡಿಮೆಯಾದರೂ ಈ ಸೇತುವೆ ಮೇಲೆ ಸಂಚರಿಸಲು ಜನರು ಭಯಪಡುವಂತಾಗಿದೆ.
ತಾರಕ ಜಲಾಶುಂದ ನೀರಾವರಿ ಇಲಾಖೆಯ ಅಧಿಕಾರಿಗಳು ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲು ಅನೇಕ ಬಾರಿ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸೇತುವೆಯಿಂದ ಆಗುವ ದುರಂತವನ್ನು ತಪ್ಪಿಸಲು ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ವಹಿಸಬೇಕಾಗಿದೆ.


ಪ್ರತಿನಿತ್ಯ ರಸ್ತೆ ಸೇತುವೆ ಮೇಲೆ ಕೂಲಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸಿ ಜೀವನ ವಾಡಬೇಕಾಗಿದೆ. ಸೇತುವೆ ಹೀಗೆ ಆಗಾಗ್ಗೆ ಜಲಾವೃತವಾದರೆ ನಾವು ಬದುಕು ಕಟ್ಟಿಕೊಳ್ಳಲು ಮತ್ತು ಜೀವನ ವಾಡಲು ಹೇಗೆ ಸಾಧ್ಯ? ಅಧಿಕಾರಿಗಳು, ಜನಪ್ರತಿನಿಧಿಗಳು ಸೇತುವೆ ಅಭಿವೃದ್ಧಿಗೆ ಮುಂದಾಗಬೇಕು.

ಪ್ರಕಾಶ್, ತೊರೊಳ್ಳಿ ನಿವಾಸಿ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

3 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

4 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

5 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago