ಜಿಲ್ಲೆಗಳು

ಬೆಳಗನಹಳ್ಳಿ ಸೇತುವೆ ಮತ್ತೊಮ್ಮೆ ಜಲಾವೃತ

ಹೆಬ್ಬಾಳ ಜಲಾಶಯ ಕೋಡಿ ಬಿದ್ದು ಅವಾಂತರ; ಹಲವು ಗ್ರಾಮಗಳ ಸಂಚಾರ ಸ್ಥಗಿತ

ಮಂಜು ಕೋಟೆ
ಎಚ್.ಡಿ.ಕೋಟೆ: ಭಾರಿ ಮಳೆಯಿಂದಾಗಿ ಪಟ್ಟಣದ ಬೆಳಗನಹಳ್ಳಿ ರಸ್ತೆ ಸೇತುವೆ ಮತ್ತೊಮ್ಮೆ ಸಂಪೂರ್ಣ ಜಲಾವೃತವಾಗಿ ಜನ ಸಾವಾನ್ಯರ ಪರಿಸ್ಥಿತಿ ಪರದಾಡುವಂತಾಗಿದೆ.
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಹೆಬ್ಬಾಳದ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ಬೆಳಗನಹಳ್ಳಿ ಸೇತುವೆ ಜಲಾವೃತಗೊಂಡು ಭಾಗದ ಅನೇಕ ಗ್ರಾಮಗಳ ಕೆಲಸಮಾನ್ಯರ ಸಂಚಾರ ಸ್ಥಗಿತಗೊಂಡು ಶಾಲಾ ವಿದ್ಯಾರ್ಥಿಗಳು, ವೃದ್ಧರು, ರೋಗಿಗಳು, ಕೂಲಿ ಕಾರ್ಮಿಕರು ಪಟ್ಟಣಕ್ಕೆ ಪರ್ಯಾಯ ರಸ್ತೆ ಮತ್ತು ಜಮೀನುಗಳು ತೋಟಗಳ ಮುಖಾಂತರ ಬರಬೇಕಾಗಿತ್ತು. ಮತ್ತೆ ಕೆಲವರು ಪ್ರಾಣದ ಹಂಗು ತೊರೆದು ನೀರು ತುಂಬಿ ಹರಿಯುತ್ತಿರುವ ಸೇತುವೆ ಮೇಲೆ ಬರುತ್ತಿದ್ದರು.

೬ ತಿಂಗಳಿನಿಂದ ೪ ಬಾರಿ ಜಲಾವೃತಗೊಂಡಿರುವ ಈ ಸೇತುವೆಯಿಂದಾಗಿ ಈ ಭಾಗದ ಜನರಿಗೆ ಮಳೆ ಬಂದರೆ ದೊಡ್ಡ ಆಘಾತವೇ ಎದುರಾಗಲಿದೆ . ಸೇತುವೆ ಅನೇಕ ಬಾರಿ ಜಲಾವೃತಗೊಂಡಿರುವುದರಿಂದ ಸೇತುವೆ ಅಕ್ಕಪಕ್ಕದ ತಡೆಗೋಡೆ ಮುರಿದು ಬಿದ್ದಿದ್ದು ಸೇತುವೆ ಸಹ ದುಸ್ಥಿತಿಗೆ ಬಂದಿದೆ. ಹೀಗಾಗಿ ನೀರಿನ ಪ್ರವಾಣ ಕಡಿಮೆಯಾದರೂ ಈ ಸೇತುವೆ ಮೇಲೆ ಸಂಚರಿಸಲು ಜನರು ಭಯಪಡುವಂತಾಗಿದೆ.
ತಾರಕ ಜಲಾಶುಂದ ನೀರಾವರಿ ಇಲಾಖೆಯ ಅಧಿಕಾರಿಗಳು ಸೇತುವೆಯನ್ನು ಮೇಲ್ದರ್ಜೆಗೆ ಏರಿಸಲು ಅನೇಕ ಬಾರಿ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಸೇತುವೆಯಿಂದ ಆಗುವ ದುರಂತವನ್ನು ತಪ್ಪಿಸಲು ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮ ವಹಿಸಬೇಕಾಗಿದೆ.


ಪ್ರತಿನಿತ್ಯ ರಸ್ತೆ ಸೇತುವೆ ಮೇಲೆ ಕೂಲಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸಿ ಜೀವನ ವಾಡಬೇಕಾಗಿದೆ. ಸೇತುವೆ ಹೀಗೆ ಆಗಾಗ್ಗೆ ಜಲಾವೃತವಾದರೆ ನಾವು ಬದುಕು ಕಟ್ಟಿಕೊಳ್ಳಲು ಮತ್ತು ಜೀವನ ವಾಡಲು ಹೇಗೆ ಸಾಧ್ಯ? ಅಧಿಕಾರಿಗಳು, ಜನಪ್ರತಿನಿಧಿಗಳು ಸೇತುವೆ ಅಭಿವೃದ್ಧಿಗೆ ಮುಂದಾಗಬೇಕು.

ಪ್ರಕಾಶ್, ತೊರೊಳ್ಳಿ ನಿವಾಸಿ.

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

4 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

4 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

4 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

4 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

5 hours ago