ಚಾಮರಾಜನಗರ: ಅರಣ್ಯ ಅಪರಾಧಗಳ ಪತ್ತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ (ಬಿಆರ್ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ತರಬೇತಿ ಪಡೆದ ಶ್ವಾನ ಝಾನ್ಸಿ ವಾರದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದೆ.
ಡಿ.30ರಂದೇ ಘಟನೆ ನಡೆದಿದ್ದರೂ, ಮಾಹಿತಿ ಬಹಿರಂಗಗೊಂಡಿರಲಿಲ್ಲ. ಶ್ವಾನವನ್ನು ಪುಣಜನೂರಿನಲ್ಲಿ ನಿಯೋಜಿಸಲಾಗಿತ್ತು. ತರಬೇತಿ ಪಡೆದು ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ನಾಯೊಂದನ್ನು ಬೆನ್ನಟ್ಟಿಕೊಂಡು ಹೋದಾಗ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜರ್ಮನ್ ಶೆಫರ್ಡ್ ತಳಿಯಹೆಣ್ಣು ಶ್ವಾನವನ್ನು 2021ರ ನವೆಂಬರ್ 25ರಂದು ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸಲಾಗಿತ್ತು. ಆಗ ಅದಕ್ಕೆ ಒಂಬತ್ತು ತಿಂಗಳು ವಯಸ್ಸಾಗಿತ್ತು.
ಟ್ರಾಫಿಕ್ ಇಂಡಿಯಾ ಎಂಬ ಸ್ವಯಂ ಸೇವಾ ಸಂಸ್ಥೆಯ ಸಹಕಾರದೊಂದಿಗೆ ಝಾನ್ಸಿಯನ್ನು ಇಲಾಖೆಯ ಸೇವೆಗೆ ನಿಯೋಜಿಸಲಾಗಿತ್ತು. ಇದಕ್ಕೂ ಮೊದಲು ಏಳು ತಿಂಗಳ ಕಾಲ ಚಂಡೀಗಡದ ಐಟಿಬಿಪಿ ತರಬೇತಿ ಕೇಂದ್ರದಲ್ಲಿ ಅಪರಾಧ ಪತ್ತೆಗೆ ಸಂಬಂಧಿಸಿದ ತರಬೇತಿಯನ್ನು ಅದಕ್ಕೆ ನೀಡಲಾಗಿತ್ತು.
ಅರಣ್ಯ ಇಲಾಖೆಗೆ ಸೇರ್ಪಡೆಗೊಂಡ ಬಳಿಕ ಯಾವುದೇ ಕಾರ್ಯಾಚರಣೆಗಳಲ್ಲಿ ಶ್ವಾನ ಭಾಗವಹಿಸಿರಲಿಲ್ಲ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…